ಐಷಾರಾಮಿ ಕಾರಿನಲ್ಲಿ ಬಂದು ಸ್ವಚ್ಚಂದವಾಗಿದ ನೇತ್ರಾವತಿ ಒಡಲಿಗೆ ತ್ಯಾಜ್ಯ ಎಸೆದರು! ಕೊನೆಗೂ ಕಸದ ಕಾರು ತಲುಪುವ ಜಾಗಕ್ಕೆ ತಲುಪಿ ಬಿಟ್ಟಿತ್ತು!

ಮಂಗಳೂರು: ಮಂಗಳೂರಿನ ಉಳ್ಳಾಲ ಸ್ವಚ್ಚಂದವಾಗಿ ಹರಿಯುವ ನೇತ್ರಾವತಿ ನದಿ ನೀರನ್ನು ಮಾಲಿನ್ಯ ಮಾಡುವವರು ಈ ವರದಿಯನ್ನು ನೋಡಲೇ ಬೇಕಿದೆ.

ಕುಡಿಯಲು ಸ್ವಚ್ಛ ನೀರು ಬೇಕು ಉಸಿರಾಡಲು ಉತ್ತಮ ವಾತಾವರಣದಲ್ಲಿರುವ ಗಾಳಿ ಬೇಕು ಆದರೆ ಸ್ವಚ್ಛತೆಯ ಪರಿಪಾಠ ಯಾರಿಗೂ ಬೇಡವಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರ ಆಡಂಕುದ್ರು ಬಳಿ ಇರುವ ನೇತ್ರಾವತಿ ಸೇತುವೆ ಜನರಿಗೆ ಕಸ, ತ್ಯಾಜ್ಯ ಎಸೆಯಲು ಅತ್ಯಂತ ಸುಲಭ ಜಾಗವಾಗಿತ್ತು. ನೇತ್ರಾವತಿ ಸೇತುವೆಯಲ್ಲಿ ಸರಣಿ ಆತ್ಮಹತ್ಯೆ ಬಳಿಕ ಸೇತುವೆಗೆ ಎತ್ತರದ ತಂತಿ ಬೇಲಿ ಹಾಕಿದ ಬಳಿಕ ಆತ್ಮಹತ್ಯೆ ಪ್ರಮಾಣ ಕಡಿಮೆಯಾದರೂ ಸೇತುವೆ ಮೂಲಕ ನದಿಗೆ ಕಸ ಎಸೆಯುವುದು ಮಾತ್ರ ಇನ್ನೂ ನಿಂತಿಲ್ಲ.

ಇಲ್ಲೊಂದು ಕಾರಿನಲ್ಲಿ ಬಂದ ಸುಶಿಕ್ಷಿತರಂತೆ ಕಾಣುವ ವಿಕೃತ ಮನಸಿನ ಮಹಿಳೆಯರಿಬ್ಬರು ಕಸ ಎಸೆಯುವ ದೃಶ್ಯಗಳನ್ನು ಸೆರೆ ಹಿಡಿದು ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯನ್ನು ನೀಡುವಲ್ಲಿ ಪ್ರಜ್ಞಾವಂತರ ತಂಡ ಯಶಸ್ವಿಯಾಗಿದೆ.

ಈ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಾಲತಾಣದಲ್ಲಿ “ನಮ್ಮ ನೇತ್ರಾವತಿ ನಮ್ಮ ಜವಾಬ್ದಾರಿ’ ಸ್ಲೋಗನ್‌ ಮೂಲಕ ಅಕ್ರೋಶ ವ್ಯಕ್ತವಾಗುತ್ತಿದೆ.

ಬೆಂಗಳೂರು ನೋಂದಾಯಿತ ಕೆಂಪು ಕಾರಿನಲ್ಲಿ ಬಂದಿದ್ದ ಇಬ್ಬರು ಮಹಿಳೆಯರು ತ್ಯಾಜ್ಯವನ್ನೊಳಗೊಂಡ ಪ್ಲಾಸ್ಟಿಕ್‌ ಚೀಲವನ್ನು ತಂತಿ ಬೇಲಿ ಮೇಲಿನಿಂದ ನದಿಗೆ ಎಸೆಯುವ 15 ಸೆಕೆಂಡ್‌ಗಳ ದೃಶ್ಯ ಇದೀಗ ವೈರಲ್‌ ಆಗಿದ್ದು

ಇದೀಗ ನದಿಗೆ ಕಸವನ್ನು ಎಸೆದ ಬೆಂಗಳೂರು ಮೂಲದ ವಾಹನವನ್ನು ಪತ್ತೆ ಹಚ್ಚಿ ಕಾರಿನಲ್ಲಿದ್ದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

KA 03 NB 4648 Registration ಕಾರಿನಲ್ಲಿ ಬಂದು ಈ ಕೃತ್ಯ ಎಸಗಿರುವವರ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ಆರೋಗ್ಯ ನಿರೀಕ್ಷಕರು ನೀಡಿದ ದೂರಿನ ಆಧಾರದ ಮೇಲೆ ಕಂಕನಾಡಿ ನಗರ ಪೋಲಿಸ್ ಠಾಣೆಯಲ್ಲಿ ವಾಹನವನ್ನು ವಶಕ್ಕೆ ಪಡೆದು ,ಕಾರಿನಲ್ಲಿದ್ದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

Spread the love
  • Related Posts

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ್ದು ಸಂಚಾರಕ್ಕೆ ತೊಡಕಾಗಿದ್ದು ತಕ್ಷಣವೇ ಕಾರ್ಯಪ್ರವೃತ್ತರಾದ ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಸಂಚಾರಕ್ಕೆ ಅನುವುಮಾಡಿಕೊಡಲಾಗಿದೆ. Spread the love

    Spread the love

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಬೆಳ್ತಂಗಡಿ : ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆದೇಶ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹವಮಾನ ಇಲಾಖೆಯ…

    Spread the love

    You Missed

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    • By admin
    • June 1, 2025
    • 38 views
    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    • By admin
    • May 31, 2025
    • 43 views
    ಭಾರಿ  ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    • By admin
    • May 30, 2025
    • 53 views
    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    • By admin
    • May 30, 2025
    • 69 views
    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ

    • By admin
    • May 27, 2025
    • 52 views
    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ

    ಧರ್ಮಸ್ಥಳ ಪೂರ್ಜೆ ಬಳಿ ಸಿಡಿಲು ಬಡಿದು ವ್ಯಕ್ತಿಗೆ ಗಾಯ ಆಸ್ಪತ್ರೆಗೆ ದಾಖಲು

    • By admin
    • May 26, 2025
    • 118 views
    ಧರ್ಮಸ್ಥಳ ಪೂರ್ಜೆ ಬಳಿ ಸಿಡಿಲು ಬಡಿದು ವ್ಯಕ್ತಿಗೆ ಗಾಯ ಆಸ್ಪತ್ರೆಗೆ ದಾಖಲು