ಮದುವೆ ಮನೆಯಲ್ಲಿ ಹಳದಿ ಶಾಸ್ತ್ರದ ವೇಳೆ ಬಾವಿ ಕಟ್ಟೆ ಕುಸಿದು 13 ಮಂದಿ ಜಲಸಮಾಧಿ…!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮದುವೆ ಮನೆಯಲ್ಲಿ ಯಾರು ಊಹಿಸಲು ಸಾಧ್ಯವಾಗದ ಘಟನೆಯೊಂದು ನಡೆದಿದೆ. ಮದುವೆ ಮನೆಯಲ್ಲಿ ಅರಿಶಿಣ ಶಾಸ್ತ್ರ ನಡೆಯುತ್ತಿದ್ದ ವೇಳೆ ಸುಮಾರು 13 ಮಂದಿ ಮಹಿಳೆಯರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ದುರಂತ ಘಟನೆ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ನೆಬುವಾ ನೌರಂಗಿಯಾ ಗ್ರಾಮದಲ್ಲಿ ನಡೆದಿದೆ.

ಮದುವೆ ಮನೆಯಲ್ಲಿ ಸಾಮಾನ್ಯವಾಗಿ ನಡೆಯುವ ಶಾಸ್ತ್ರಗಳಲ್ಲಿ ಅರಿಶಿಣ/ಹಳದಿ ಶಾಸ್ತ್ರವೂ ಒಂದು. ಅಂತೆಯೇ ನೆಬುವಾ ನೌರಂಗಿಯಾ ಗ್ರಾಮದಲ್ಲೂ ಈ ಹಳದಿ ಶಾಸ್ತ್ರ ನಡೆಯುತ್ತಿತ್ತು. ಈ ಕಾರ್ಯಕ್ರಮದಲ್ಲಿ ಅನೇಕ ಯುವತಿಯರು, ಬಂಧು-ಬಳಗದವರು ಭಾಗವಹಿಸಿದ್ದರು. ಬಾವಿಯ ಕಟ್ಟೆಯ ಮೇಲೆ ಕುಳಿತು ಹಳದಿ ಶಾಸ್ತ್ರವನ್ನು ನೋಡುತ್ತಿದ್ದರು. ಇದ್ದಕ್ಕಿದ್ದಂತೆ ಬಾವಿಯ ಮೇಲಿದ್ದ ಕಬ್ಬಿಣದ ಗ್ರಿಲ್ ಮುರಿದಿದೆ. ಆಗ ಬಾವಿಯ ಮೇಲೆ ನಿಂತಿದ್ದ ಅಷ್ಟೂ ಮಹಿಳೆಯರು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾರೆ. ಈ ಘಟನೆ ಬುಧವಾರ ರಾತ್ರಿ 8.30ರ ಸಮಯದಲ್ಲಿ ನಡೆದಿದೆ. ಮಹಿಳೆಯರು ಕುಳಿತಿದ್ದರಿಂದ ಭಾರ ಹೆಚ್ಚಾಗಿ ಬಾವಿಯ ಕಬ್ಬಿಣದ ಗ್ರಿಲ್ ಮುರಿದಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಈ ವೇಳೆ ಪೊಲೀಸರು ಮತ್ತು ಗ್ರಾಮಸ್ಥರ ನೆರವಿನಿಂದಾಗಿ ಸುಮಾರು 15 ಮಂದಿ ಮಹಿಳೆಯರನ್ನು ರಕ್ಷಿಸಲಾಯಿತು. ಆದರೆ 13 ಜನರನ್ನು ಬದುಕಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದು ಬಂದಿದೆ.

ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಈ ಘಟನೆಗೆ ಸಂಬಂಧಿಸಿದಂತೆ ದೇಶದ ಪ್ರಧಾನಿ ಕೂಡ ಕಂಬನಿ ಮಿಡಿದಿದ್ದು ಟ್ವಿಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ. ಉತ್ತರಪ್ರದೇಶದ ಕುಶಿನಗರದಲ್ಲಿ ನಡೆದ ಘಟನೆ ಹೃದಯ ವಿದ್ರಾವಕವಾಗಿದೆ. ಇದರಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಾನು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು. ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್ ಕೂಡ ಘಟನೆ ಬಗ್ಗೆ ಟ್ವಿಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 268 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 296 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 197 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ