ಮುಂಬೈನ 5 ತಿಂಗಳಿನ ಟೀರಾಗೆ ಬೇಕಿರುವ ‘ಔಷಧಿ’ ಮೇಲಿನ 6 ಕೋಟಿ ರೂ.ಜಿಎಸ್’ಟಿ ಮನ್ನಾ ಮಾಡಿದ ಪ್ರಧಾನಿ ಮೋದಿ!

ಮುಂಬೈ: ಜೀವನ್ಮರಣ ಹೋರಾಟ ನಡೆಸುತ್ತಿರುವ ಐದು ತಿಂಗಳ ಟೀರಾ ಕಾಮತ್‌ಳ ಜೀವ ಉಳಿಸುವ ಔಷಧಿ ಆಮದಿನ ಮೇಲಿನ ತೆರಿಗೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮನ್ನಾ ಮಾಡಿದ್ದು ಈ ನಿರ್ಧಾರ ಮಗುವಿನ ಪೋಷಕರಿಗೆ ಹೊಸ ಆಶಾಕಿರಣ ಮೂಡಿಸಿದೆ.

ಅಪರೂಪದ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಟೀರಾ ಕಾಮತ್ ಗೆ 16 ಕೋಟಿ ರೂ. ಮೌಲ್ಯದ ಔಷಧಿಯನ್ನು ಆಮದು ಮಾಡಿಕೊಳ್ಳುತ್ತಿದ್ದು ಇದರ ಮೇಲಿನ 6 ಕೋಟಿ ರೂ.ಗಳ ಜಿಎಸ್ಟಿ ಮೊತ್ತವನ್ನು ಪಿಎಂ ಮೋದಿ ಮನ್ನಾ ಮಾಡಿದ್ದಾರೆ.

ಟೀರಾ ಪೋಷಕರು ಜೀನ್ ಬದಲಿ ಚಿಕಿತ್ಸೆಯಿಂದ ಗುಣಪಡಿಸಬಹುದಾದ ಔಷಧಿಯನ್ನು ಕ್ರೌಡ್-ಫಂಡಿಂಗ್ ಮೂಲಕ 16 ಕೋಟಿ ರೂಪಾಯಿಯನ್ನು ಸಂಗ್ರಹಿಸಿದ್ದರು. ಇನ್ನು ಈ ಔಷಧಿಯನ್ನು ಅಮೆರಿಕಾದಿಂದ ಆಮದು ಮಾಡಿಕೊಳ್ಳಬೇಕಾಗಿತ್ತು. ಇದಕ್ಕಾಗಿ ಆಮದು ಸುಂಕವನ್ನು ಪಾವತಿ ಮಾಡಬೇಕಾಗಿತ್ತು.

ಇದಕ್ಕಾಗಿ ಪ್ರತಿಪಕ್ಷದ ನಾಯಕ ಮತ್ತು ಬಿಜೆಪಿ ಶಾಸಕ ದೇವೇಂದ್ರ ಫಡ್ನವೀಸ್ ಅವರು ಪ್ರಧಾನಿ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಟೀರಾ ಕಾಮತ್ ಪೋಷಕರು ಪತ್ರ ಬರೆದು ಔಷಧಿಗಳ ಆಮದಿಗೆ ಅನ್ವಯವಾಗುವ ಎಲ್ಲ ತೆರಿಗೆಗಳನ್ನು ವಿನಾಯಿತಿ ನೀಡುವಂತೆ ಕೋರಿದ್ದರು.

ಇದೇ ವಿಷಯವಾಗಿ 6 ಕೋಟಿ ರೂ. ಆಮದು ಸುಂಕವನ್ನು ಕಡಿತ ಮಾಡಬೇಕು ಎಂದು ಫಡ್ನವೀಸ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮೋದಿ ಅವರು ಆಮದು ಸುಂಕ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮುಂಬೈ ನಿವಾಸಿಗಳಾದ ಪ್ರಿಯಾಂಕಾ ಮತ್ತು ಮಿಹಿರ್ ಕಾಮತ್ ಅವರು ಆಗಸ್ಟ್ 14, 2020 ರಂದು ಟೀರಾಗೆ ಜನ್ಮ ನೀಡಿದರು. ಟೀರಾ ಹುಟ್ಟಿದಾಗ ಲವಲವಿಕೆಯಿಂದಲೇ ಇದ್ದಳು. ಆದರೆ ಎರಡು ವಾರಗಳ ನಂತರ, ಟೀರಾ ಎದೆ ಹಾಲು ಕುಡಿಯಲು ತೊಂದರೆ ಅನುಭವಿಸಿದ್ದಳು. ಆಗ ಪೋಷಕರು ಮಕ್ಕಳ ವೈದ್ಯರ ಬಳಿಗೆ ಕರೆದೊಯ್ದಿದ್ದರು. ಆಗ ಮಗುವಿಗೆ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ(ಎಸ್ಎಂಎ) ಕಾಯಿಲೆ ಇರುವುದನ್ನು ವೈದ್ಯರು ಪತ್ತೆ ಹಚ್ಚಿದ್ದರು.

Spread the love
  • Related Posts

    ಮಕ್ಕಳನ್ನು ಮಾದಕ ವಸ್ತುಗಳಿಂದ ದೂರವಿಟ್ಟು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ಯುವಜನತೆ ಕೈಜೋಡಿಸಬೇಕು: ಡಾ. ನವೀನ್ ಚಂದ್ರ ಶೆಟ್ಟಿ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಹಾಗೂ ಆರೋಗ್ಯ ಭಾರತಿ ಸಕಲೇಶಪುರ ಘಟಕ, ಲಯನ್ಸ್ ಕ್ಲಬ್ ಕೆ.ಹೊಸಕೋಟೆ ವತಿಯಿಂದ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆ.ಹೊಸಕೋಟೆ ಶ್ರೀಮತಿ ಶಾರದಾ…

    Spread the love

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    You Missed

    ಮಕ್ಕಳನ್ನು ಮಾದಕ ವಸ್ತುಗಳಿಂದ ದೂರವಿಟ್ಟು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ಯುವಜನತೆ ಕೈಜೋಡಿಸಬೇಕು: ಡಾ. ನವೀನ್ ಚಂದ್ರ ಶೆಟ್ಟಿ

    • By admin
    • July 2, 2025
    • 7 views
    ಮಕ್ಕಳನ್ನು ಮಾದಕ ವಸ್ತುಗಳಿಂದ ದೂರವಿಟ್ಟು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ಯುವಜನತೆ ಕೈಜೋಡಿಸಬೇಕು: ಡಾ. ನವೀನ್ ಚಂದ್ರ ಶೆಟ್ಟಿ

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 433 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 310 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 206 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 303 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 162 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ