ನಾಗರ ಪಂಚಮಿ ದಿನ ಹಿಂದೂಗಳ ಹಬ್ಬಗಳ ಟೀಕಿಸುವ ಸತೀಶ ಜಾರಕಿಹೊಳಿ ಯವರು ಕ್ಷಮೆಯಾಚನೆ ಮಾಡಬೇಕು: HJS ಮೋಹನ ಗೌಡ ಆಗ್ರಹ

ಬೆಂಗಳೂರು: ನಾಗರಪಂಚಮಿಯಂದು ಹಿಂದೂಗಳು ನಾಗದೇವರಿಗೆ ಹಾಲನ್ನು ಎರೆಯುವ ಸಂಪ್ರದಾಯವನ್ನು ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿಯವರು ಟೀಕಿಸುತ್ತಾ, ಇದು ಅವೈಜ್ಞಾನಿಕ ಕೋಟ್ಯಂತರ ಲೀಟರ್ ಹಾಲು ವ್ಯರ್ಥವಾಗುತ್ತದೆ. ಹಾಗಾಗಿ ಅದನ್ನು ಬಡಮಕ್ಕಳಿಗೆ, ರೋಗಿಗಳಿಗೆ ನೀಡಿ ಎಂದು ಹಿಂದೂ ವಿರೋಧಿ ಕರೆ ನೀಡುವ ಒಂದು ಪೋಸ್ಟ್ ಸಾಮಾಜಿಕ ಮಾಧ್ಯಗಳಲ್ಲಿ ಹರಿದಾಡುತ್ತಿದೆ. ಅದಲ್ಲದೇ ಕರ್ನಾಟಕದಲ್ಲಿ ಪ್ರತಿ ವರ್ಷ ೪೦ ಸಾವಿರಕ್ಕೂ ಹೆಚ್ಚು ಮಕ್ಕಳು ಅಪೌಷ್ಠಿಕತೆಯಿಂದ ಮರಣ ಹೊಂದುತ್ತಿದ್ದಾರೆ, ನಾಗನಿಗೆ ಹಾಲು ಎರೆಯವ ಬದಲು, ಬಡಮಕ್ಕಳಿಗೆ ಹಾಲು ನೀಡಿ ಎಂದು ಕರೆ ನೀಡಿದ್ದಾರೆ. ಇದು ಇವರ ಹಿಂದೂಗಳ ಧಾರ್ಮಿಕ ಹಬ್ಬಗಳ ಹಿಂದಿರುವ ಶಾಸ್ತ್ರವನ್ನು ಅರಿತುಕೊಳ್ಳದೇ ಹಿಂದುಗಳ ಹಬ್ಬದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯವಕ್ತಾರ ಶ್ರೀ ಮೋಹನ ಗೌಡ ಆಗ್ರಹಿಸಿದ್ದಾರೆ.

ಶಿವಲಿಂಗಕ್ಕೆ ಹಾಲು ಅರ್ಪಿಸಬೇಡಿ ಮಕ್ಕಳಿಗೆ ನೀಡಿ ಹೇಳುವವರು, ಹಾಲಿನ ಬೆಲೆ ಹೆಚ್ಚಿಸಲು ಪ್ರತಿಭಟನೆ ಹೆಸರಿನಲ್ಲಿ ಲಕ್ಷಗಟ್ಟಲೆ ಲೀಟರ್ ಹಾಲು ಬೀದಿಯಲ್ಲಿ ಸುರಿಯುವಾಗ ಯಾಕೆ ಮೌನವಾಗಿದ್ದರು? ಅದಲ್ಲದೇ ಶೇಕಡಾ 80 ರಷ್ಟು ಹಾಲನ್ನು ಕಲಬೆರಕೆ ಮಾಡಿ ಮಾರಾಟ ಮಾಡುವ ಮೂಲಕ ಲಕ್ಷಾಂತರ ಮಕ್ಕಳ ಜೀವನ ಹಾಳು ಮಾಡುವ ಸಮಸ್ಯೆಯ ಬಗ್ಗೆ ಯಾಕೆ ಮೌನ ?

ಭಾರತೀಯ ಸಂವಿಧಾನವು ಪ್ರತಿಯೊಬ್ಬರಿಗೂ ತಮ್ಮ ಧರ್ಮವನ್ನು ಆಚರಿಸುವ ಸಾಂವಿಧಾನಿಕ ಹಕ್ಕನ್ನು ನೀಡಿದೆ. ಅದರಲ್ಲಿ ಹಸ್ತಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ’ ಎಂದು ನಾವು ಹೇಳಬಯಸುತ್ತೇವೆ. ಅಪೌಷ್ಟಿಕತೆಯಿಂದ ಸಾಯುತ್ತಿರುವ ಬಡ ಮಕ್ಕಳಿಗೆ ಹಾಲು ಸಿಗದಿರಲು ಸರ್ಕಾರ ಅವರಿಗೆ ಸರಿಯಾದ ಸೌಲಭ್ಯ ಮತ್ತು ಪರಿಹಾರಗಳ ತಲುಪದಿರುವುದರ ಪರಿಣಾಮವಾಗಿದೆ. ಈ ರೀತಿ ಮೂಲ ಸಮಸ್ಯೆಯನ್ನು ಪರಿಹರಿಸದೆ ಕೇವಲ ಮೇಲುಮೇಲಿನ ಉಪಾಯವೆಂದು ನಾಗಪಂಚಮಿ ಅಥವಾ ಮಹಾಶಿವರಾತ್ರಿಯ ಕೇವಲ ಒಂದು ದಿನದ ಹಾಲನ್ನು ನೀಡುವ ಮೂಲಕ ಅಪೌಷ್ಟಿಕತೆಯ ಸಮಸ್ಯೆಯನ್ನು ಪರಿಹರಿಸಬಹುದೇ?

ಇಂದು, ಹಿಂದೂ ಧರ್ಮ, ಸಂಪ್ರದಾಯಗಳು ಮತ್ತು ಹಬ್ಬಗಳ ಮೇಲೆ ಕೆಸರೆರಚಿ ಖ್ಯಾತಿ ಪಡೆಯುವುದು ಫ್ಯಾಷನ್ ಆಗಿದೆ. ಹೀಗೆ ಹೇಳುವವರು ಬಕ್ರಿದ್ ಮತ್ತು ಇತರ ಧರ್ಮಗಳಿಗೆ ಏಕೆ ಮಾರ್ಗದರ್ಶನ ಮಾಡುವುದಿಲ್ಲ? ಹಿಂದೂಗಳು ಸಹಿಷ್ಣುರು, ಆದ್ದರಿಂದ ಅವರನ್ನು ಸಾಫ್ಟ್ ಟಾರ್ಗೆಟ್ ಮಾಡಲಾಗುತ್ತದೆ. ಎಲ್ಲ ಹಿಂದೂಗಳು ಇದನ್ನು ಸಂವಿಧಾನದ ಮಾರ್ಗದಿಂದ ಈ ಹೇಳಿಕೆಯನ್ನು ಬಲವಾಗಿ ವಿರೋಧಿಸುವುದು ಅವಶ್ಯಕ. ಸತೀಶ ಜಾರಕಿಹೊಳಿ ಯವರು ಈ ಹೇಳಿಕೆ ಬಗ್ಗೆ ನಾಡಿನ ಸಮಸ್ತ ಹಿಂದೂಗಳಲ್ಲಿ ಕ್ಷಮೆಯಾಚಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯವಕ್ತಾರ ಶ್ರೀ ಮೋಹನ ಗೌಡ ಆಗ್ರಹಿಸಿದ್ದಾರೆ.

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 23 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 24 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 39 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 216 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 62 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ