ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌

ಉಡುಪಿ: ಕರ್ನಾಟಕದ ಪಶ್ಚಿಮ ಘಟ್ಟ ತಪ್ಪಲಿನ ಅರಣ್ಯದಂಚಿನ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡಿದ್ದು, ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ಎನ್ಕೌಂಟರ್ ನಡೆದಿದೆ.

ಮಹತ್ವದ ಬೆಳವಣಿಗೆಯಲ್ಲಿ ಕಾಡಿನಲ್ಲಿ ಶೂಟೌಟ್‌ ಸುದ್ದಿಯೊಂದು ಕೇಳಿಬಂದಿದೆ. ನಕ್ಸಲ್‌ ಮುಖಂಡ ವಿಕ್ರಂಗೌಡ ಎನ್‌ಕೌಂಟರ್‌ ಆಗಿದ್ದಾನೆಂಬ ಮಾಹಿತಿ ಲಭ್ಯವಾಗಿದೆ.ಕಳೆದ ಕೆಲದಿನಗಳಿಂದ ಹೆಬ್ರಿ, ಶೃಂಗೇರಿ ಭಾಗದಲ್ಲಿ ನಕ್ಸಲ್ ಚಲನವಲನದ ಬಗ್ಗೆ ಎಎನ್‌ಎಫ್‌ಗೆ ಮಾಹಿತಿ ಲಭ್ಯವಾಗಿತ್ತು. ಈ ನಡುವೆ ANF ತಂಡ ನಿನ್ನೆ ನಡೆಸಿದ್ದ ಕೂಂಬಿಂಗ್‌ ವೇಳೆ ವಿಕ್ರಂಗೌಡ ನೇತೃತ್ವದ ನಕ್ಸಲ್‌ ತಂಡ ಮುಖಾಮುಖಿಯಾಗಿದೆ. ಈ ವೇಳೆ ನಡೆದ ಶೂಟೌಟ್‌ನಲ್ಲಿ ವಿಕ್ರಂಗೌಡ ಎನ್‌ಕೌಂಟರ್‌ ಆಗಿದ್ದಾನೆ. ಹೆಬ್ರಿ ವ್ಯಾಪ್ತಿಯಲ್ಲಿ ಪೀತೆ ಬೈಲ್‌ ಎಂಬಲ್ಲಿ ಘಟನೆ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಈತ ಮೂಲತಃ ಹೆಬ್ರಿಯವನು ಎನ್ನಲಾಗಿದ್ದು, ಶೃಂಗೇರಿ, ಕಾರ್ಕಳ ಭಾಗದಲ್ಲಿ ಸಕ್ರಿಯನಾಗಿದ್ದ ಕೇರಳದಲ್ಲಿ ನಕ್ಸಲ್‌ ಚಟುವಟಿಕೆಗೆ ಥಂಡರ್‌ ಬೋಲ್ಟ್‌ ಟೀಂ ಬಿಗಿ ಮಾಡಿದ ಬಳಿಕ ನಕ್ಸಲ್‌ ಟೀಂ ಕರ್ನಾಟಕಕ್ಕೆ ವಾಪಸ್‌ ಆಗಿತ್ತು. ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಡಗಾರು ಲತಾ ಓಡಾಟ ನಡೆಸಿದ್ದ ಬಗ್ಗೆ ಮಾಹಿತಿ ಲಭ್ಯವಾಗಿತ್ತಷ್ಟೆ ಅಲ್ಲದೆ ಆ ಸಂಬಂಧ ಪೊಲೀಸರು uapa ಕಾಯ್ದೆ ಅಡಿ ಕೇಸ್‌ ದಾಖಲಿಸಿದ್ದರು.

ಇದೆಲ್ಲಾ ಬೆಳವಣಿಗೆ ಬಳಿಕ ಇದೀಗ ವಿಕ್ರಂಗೌಡ ಪೊಲೀಸ್‌ ಶೂಟೌಟ್‌ನಲ್ಲಿ ಎನ್‌ಕೌಂಟರ್‌ ಆಗಿದ್ದಾನೆ. ಹೆಬ್ರಿಯ ಪೀತೆಬೈಲ್‌ನಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. 13 ವರ್ಷಗಳ ಬಳಿಕ ಎನ್‌ಕೌಂಟರ್‌ ಕಬ್ಬಿನಾಲೆ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ ನೊಂದಿಗೆಉಡುಪಿ ಭಾಗದಲ್ಲಿ 13 ವರ್ಷಗಳ ನಂತರ ಗುಂಡಿನ ಮೊರತೆ ಕೇಳಿದಂತಾಗಿದೆ. ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್‌ಕೌಂಟರ್‌ ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾಗಿದ್ದಾರೆ.

ಯಾರು ಈ ವಿಕ್ರಂ ಗೌಡ?

ನಕ್ಸಲರ ನೇತ್ರಾವತಿ ದಳದ ನಾಯಕ ವಿಕ್ರಂ ಗೌಡ. ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಪೀತೆಬೈಲ್ ಅರಣ್ಯ ಪ್ರದೇಶದ ಗ್ರಾಮದಲ್ಲಿ ನಡೆದ ಎನ್ಕೌಂಟರ್ನಲ್ಲಿ ಹತನಾಗಿದ್ದಾನೆ.ಮತ್ತೆ ಬಿರುಸುಗೊಳ್ಳುತ್ತಿರುವ ನಕ್ಸಲ್ ಚಟುವಟಿಕೆ ಇತ್ತೀಚೆಗೆ ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ಭಾಗದಲ್ಲಿ ಕೆಲವು ಗ್ರಾಮಗಳಿಗೆ ನಕ್ಸಲರು ಭೇಟಿ ನೀಡಿದ ಬಗ್ಗೆ ವರದಿಯಾಗಿತ್ತು. ಅದೇ ರೀತಿ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೆಲವೆಡೆ ನಕ್ಸಲರು ಭೇಟಿ ನೀಡಿದ ಸುಳಿವು ದೊರೆತಿತ್ತು. ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬವರ ಮನೆಯಲ್ಲಿ 3 ಬಂದೂಕುಗಳು ಪತ್ತೆಯಾಗಿದ್ದವು. ಆ ಮನೆಗೆ ನಕ್ಸಲ್ ನಾಯಕಿ ಮುಂಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಸುಳಿವು ಸಿಕ್ಕಿತ್ತು.

ಅರಣ್ಯ ಒತ್ತುವರಿ ತೆರವು, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಕ್ಸಲರು ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿತ್ತು. ಇದೇ ಕಾರಣದಿಂದ ಮಲೆನಾಡು ಹಾಗೂ ಕರವಾಳಿ ಭಾಗದ ಪಶ್ಚಿಮ ಘಟ್ಟದ ಅಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಹೆಚ್ಚಾಗುತ್ತಿರುವ ಅನುಮಾನ ಇದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ : ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ:28.08.2025 ರಂದು ರಜೆ ಘೋಷಿಸಲಾಗಿದೆ. ಎಂದು ತಹಶಿಲ್ದಾರ್ ತಿಳಿಸಿದ್ದಾರೆ Spread the love

    Spread the love

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    Belthangady: ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಶ್ರೀ ಗೋಕುಲದಾಸ್ ಅಧೀಕ್ಷಕರು, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿನೀಡಿ ಸ್ಥಳ ಪರಿಶೀಲನೆ ಮಾಡಿ ನ್ಯಾಯಾಧೀಶ ರೊಂದಿಗೆ ಮತ್ತು ವಕೀಲರೊಂದಿಗೆ ಸಂವಾದ ನಡೆಸಿದರು. ಈ ಸಂಧರ್ಭದಲ್ಲಿ ವಕೀಲರ ಸಂಘದ…

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 13 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 19 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 37 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 210 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 61 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ