ಪ್ರಕೃತಿಯ ಮಡಿಲಲ್ಲಿದೆ ‘ನೋನಿ’ಯೆಂಬ ಸಂಜೀವಿನಿ

🖊️ ಸಂಪಾದಕೀಯ

ನಮ್ಮ ಪರಿಸರದಲ್ಲಿ ಅದೆಷ್ಟು ಔಷಧೀಯ ಗುಣಗಳಿರುವ ಸಸ್ಯ ಪ್ರಭೇದಗಳಿವೆ. ಪ್ರಭೇದಗಳನ್ನು ಗುರುತಿಸಿ ಅವುಗಳಲ್ಲಿ ಔಷಧೀಯ ಗುಣಗಳಿವೆ ಎಂಬುದನ್ನು ನಾವು ತಿಳಿದುಕೊಂಡಿರುವುದಿಲ್ಲ. ಆರೋಗ್ಯವನ್ನು ಕಾಪಾಡುವಲ್ಲಿ ಹಣ್ಣುಗಳು ಸಹ ಮುಖ್ಯ ಪಾತ್ರವಹಿಸಿವೆ. ಕೆಲವೊಂದು ಹಣ್ಣುಗಳನ್ನು ತಿಂದರೆ ಕೆಲವೊಂದು ಕಾಯಿಲೆಗಳು ದೂರವಾಗುತ್ತದೆ. ಇದರಂತೆ ನೋನಿ ಹಣ್ಣು ಸೇವಿಸಿದರೆ ಆರೋಗ್ಯ ವೃದ್ಧಿಸುವುದು ಖಂಡಿತ.

ನೋನಿ ಹಣ್ಣು ಮೂಲತಃ ಭಾರತದ ಔಷಧೀಯ ಹಣ್ಣುಗಳಲ್ಲಿ ಒಂದು. ಪ್ರಕೃತಿಯಲ್ಲಿ ದೊರೆಯುವ ಅದ್ಭುತ ಆರೋಗ್ಯ ಹಾಗೂ ರೋಗನಿರೋಧಕ ಹಣ್ಣು ಇದಾಗಿದ್ದು ಈ ಹಣ್ಣು ಮೋರಿಂಡ ಸಿಕ್ರೆ ಪೋಲಿಯ ಎಂಬ ಸಸ್ಯ ಪ್ರಭೇದಕ್ಕೆ ಸೇರಿದೆ.

ಸುಮಾರು 150ಕ್ಕೂ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುವ ನೋನಿ ಕಾಯಿಯು ಹಲವು ಕಾಯಿಲೆಗಳ ಶಮನಕ್ಕೆ ಉಪಯುಕ್ತವಾಗಿದೆ ಮಾನಸಿಕ ಒತ್ತಡ ಅಲರ್ಜಿ ಅಸ್ತಮಾ ಕ್ಯಾನ್ಸರ್ ಗಂಟಲು ನೋವು ಕೂದಲು ಉದರುವಿಕೆ ಸಕ್ಕರೆಕಾಯಿಲೆ ಮೂತ್ರಜನಕಾಂಗದ ಕಾಯಿಲೆ ಚರ್ಮರೋಗ ಕೆಮ್ಮು ಜ್ವರಗಳಂಥ ಕಾಯಿಲೆಗಳಿಗೂ ಕೂಡ ರಾಮಬಾಣವಾಗಿದೆ. ವಿಟಮಿನ್ ಸಿ, ಎ, ಬಿ ಮತ್ತು ಕಬ್ಬಿಣದ ಅಂಶಗಳನ್ನು ಹೊಂದಿರುವ ನೋನಿ ಹಣ್ಣಿನ ಬಳಕೆಯಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ.

ಔಷಧೀಯ ಗುಣವನ್ನು ಹೊಂದಿರುವ ಈ ನೋನಿಯ ಜೊತೆ ನೀರು, ಬೆಲ್ಲ, ಏಲಕ್ಕಿ ಸೇರಿಸಿ ಜ್ಯೂಸ್ ಮಾಡಿದಾಗ ಹಾಲಿನಂತೆ ನೋರೆಯು ಬರುತ್ತದೆ. ಕುಡಿಯಲು ರುಚಿಕರವಾಗಿರುವ ನೋನಿ ಹಣ್ಣುಗಳನ್ನು ನಿತ್ಯವೂ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಹೊಸ ಚೈತನ್ಯವನ್ನು ಪಡೆಯಬಹುದು.

ನೋನಿ ಹಣ್ಣಿನಲ್ಲಿರುವ ಔಷಧೀಯ ಗುಣಗಳ ಬಗ್ಗೆ ವಿಶ್ವವಿದ್ಯಾನಿಲಯದ ಸಂಶೋಧನೆಯಿಂದಲೂ ದೃಢಪಟ್ಟಿದೆ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲು, ಮಾನಸಿಕ ಒತ್ತಡದಿಂದ ಮುಕ್ತರಾಗಲು, ನಿದ್ರೆಯ ಸಮಸ್ಯೆ ಇರುವವರು, ಸುಸ್ತು ಕಾಡುತ್ತಿರುವವರು, ಉಸಿರಾಟದ ಸಮಸ್ಯೆ ಇರುವವರು, ಮಲಬದ್ಧತೆ, ರಕ್ತದೊತ್ತಡ, ಕೀಲುನೋವು, ಹೃದಯಸಂಬಂಧಿ ಕಾಯಿಲೆಗಳು, ಖಿನ್ನತೆಯಿಂದ ಬಳಲುತ್ತಿರುವವರು ಹಾಗೂ ಪಿತ್ತಜನಕಾಂಗ ಮೂತ್ರಜನಕಾಂಗದ ನಿರ್ವಹಣೆಗೆ ಸುಗಮವಾಗುವಂತೆ ನೋಡಿಕೊಳ್ಳಲು ನೋನಿ ಹಣ್ಣು ನೆರವಾಗುತ್ತದೆ.

ನೋನಿಯನ್ನು ಔಷಧಿಯಾಗಿ ಸೇವಿಸುವರು ಮೊದಲ ಮೂರು ದಿನ ಬೆಳಗಿನ ಉಪಹಾರಕ್ಕೆ ಮುಂಚಿತವಾಗಿ ಒಂದು ಟೀ ಸ್ಪೂನ್ ಸೇವಿಸಬೇಕು. ಒಂದು ತಿಂಗಳ ಸೇವನೆಯ ನಂತರ ಉಪಹಾರಕ್ಕೆ ಮುಂಚೆ ಎರಡು ಸ್ಪೂನ್, ಮಧ್ಯಾಹ್ನ ಊಟಕ್ಕಿಂತ ಮೊದಲು 2 ಸ್ಪೂನ್ ರಸವನ್ನು ಸೇವಿಸಬೇಕು. ಕೇವಲ ಹಣ್ಣು ಮಾತ್ರವಲ್ಲದೇ ನೋನಿಯ ಎಲೆಗಳು ಕೂಡ ಬಹಳಷ್ಟು ಉಪಯುಕ್ತವಾಗಿದ್ದು ಎಲೆಯಿಂದ ತೆಗೆದ ರಸ ಅನೇಕ ರೀತಿಯ ಚರ್ಮರೋಗಗಳನ್ನು ನಿವಾರಿಸುತ್ತದೆ. ಅದ್ರಲ್ಲೂ ನೋನಿ ಎಲೆಯ ಕಷಾಯವನ್ನು ಜ್ವರ ನಿವಾರಕವಾಗಿಯೂ ಬಳಸಬಹುದು.

Spread the love
  • Related Posts

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ್ದು ಸಂಚಾರಕ್ಕೆ ತೊಡಕಾಗಿದ್ದು ತಕ್ಷಣವೇ ಕಾರ್ಯಪ್ರವೃತ್ತರಾದ ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಸಂಚಾರಕ್ಕೆ ಅನುವುಮಾಡಿಕೊಡಲಾಗಿದೆ. Spread the love

    Spread the love

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಬೆಳ್ತಂಗಡಿ : ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆದೇಶ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹವಮಾನ ಇಲಾಖೆಯ…

    Spread the love

    You Missed

    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    • By admin
    • June 1, 2025
    • 27 views
    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    • By admin
    • June 1, 2025
    • 134 views
    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    • By admin
    • May 31, 2025
    • 98 views
    ಭಾರಿ  ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    • By admin
    • May 30, 2025
    • 71 views
    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    • By admin
    • May 30, 2025
    • 79 views
    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ

    • By admin
    • May 27, 2025
    • 55 views
    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ