ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಪದಗ್ರಹಣ ಹಾಗೂ ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭ, ಹಾಗೂ ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮೇ 25 ನೇ ಆದಿತ್ಯವಾರ ಬೆಳ್ತಂಗಡಿಯ ಸಂತೆಕಟ್ಟೆ ಬಳಿಯ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಲಿದೆ. ಎಂದು ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ, ಕಲ್ಮಂಜ ತಿಳಿಸಿದರು.‌ ಅವರು ಬೆಳ್ತಂಗಡಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಸಾಮಾಜಿಕ ಚಿಂತನೆಗಳ ಮೂಲಕ ಸಮಾಜಮುಖಿ ಸೇವಾ ಯೋಜನೆಗಳನ್ನು ಮಾಡುವ ಉದ್ದೇಶದಿಂದ ಒಕ್ಕಲಿಗ ಸೇವಾಟ್ರಸ್ಟ್ ಕಾರ್ಯನಿರ್ವಹಿಸಲಿದೆ ಮೇ 25 ರಂದು ಬೆಳಿಗ್ಗೆ 10 ಗಂಟೆಗೆ ದೀಪ ಪ್ರಜ್ವಲನೆ ಮತ್ತು ಆಶೀರ್ವಚನವನ್ನು ಮಂಗಳೂರಿನ ಕಾವೂರು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠದ, ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ನೆರವೇರಿಸಲಿದ್ದಾರೆ.

ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮಂಗಳೂರು ಇದರ ಅಧ್ಯಕ್ಷ ಡಿ.ಬಿ. ಬಾಲಕೃಷ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಪದಗ್ರಹಣ ಕಾರ್ಯಕ್ರಮ, ಆಂಬುಲೆನ್ಸ್ ಲೋಕಾರ್ಪಣೆ, ನಮ್ಮ ಸಮಾಜದ ಆಶಕ್ತರಿಗೆ ಆರ್ಥಿಕ ನೆರವು, ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಸಮಾಜ ಬಂಧುಗಳಿಗೆ ಸನ್ಮಾನ,ಸಮಾಜದ ನಿವೃತ್ತ ಸೈನಿಕರಿಗೆ ಗೌರವಾರ್ಪಣೆ, ಕಾರ್ಯಕ್ರಮಗಳು ನೆರವೇರಲಿದೆ.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಒಕ್ಕಲಿಗ ಸಂಘ ಮಾಜಿ ಅಧ್ಯಕ್ಷರು, ಚನ್ನರಾಯಪಟ್ಟಣ ಶಾಸಕರಾದ ಸಿ.ಎನ್. ಬಾಲಕೃಷ್ಣ, ಶೃಂಗೇರಿ ಶಾಸಕರಾದ ಟಿ.ಡಿ‌. ರಾಜೇಗೌಡ, ಮಾಜಿ ಸಚಿವ ಗಂಗಾಧರ ಗೌಡ, ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಸಂಜೀವ ಮಠಂದೂರು, ಉಮಾಪತಿ ಶ್ರೀನಿವಾಸ ಗೌಡ, ಸೇರಿದಂತೆ ರಾಜ್ಯದ ಅನೇಕ ಒಕ್ಕಲಿಗ ನಾಯಕರು ಇನ್ನಿತರ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.‌

ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷರುಗಳಾದ ರಂಜನ್. ಜಿ. ಗೌಡ, ವಿಜಯ ಗೌಡ ವೇಣೂರು, ಕಾರ್ಯಾಧ್ಯಕ್ಷ ಶ್ರೀನಿವಾಸ ಗೌಡ ಬೆಳಾಲು, ಕಾರ್ಯದರ್ಶಿ ಭರತ್ ಗೌಡ ಬಂಗಾಡಿ, ಕೋಶಾಧಿಕಾರಿ ಸೂರಜ್ ಗೌಡ ವಳಂಬ್ರ, ಸ್ಥಾಪಕ ಟ್ರಸ್ಡಿಗಳಾದ ನವೀನ್ ಗೌಡ ಬಿ.ಕೆ. ವಸಂತ ಮರಕಡ, ಮಚ್ಚಿನ, , ಹಾಗೂ ಟ್ರಸ್ಟಿಗಳಾದ ರಾಜೇಶ್ ಕೆ. ಗೌಡ, ದಿನೇಶ್ ಗೌಡ, ಸುಂದರ ಗೌಡ ಹತ್ಯಡ್ಕ ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ : ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ:28.08.2025 ರಂದು ರಜೆ ಘೋಷಿಸಲಾಗಿದೆ. ಎಂದು ತಹಶಿಲ್ದಾರ್ ತಿಳಿಸಿದ್ದಾರೆ Spread the love

    Spread the love

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    Belthangady: ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಶ್ರೀ ಗೋಕುಲದಾಸ್ ಅಧೀಕ್ಷಕರು, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿನೀಡಿ ಸ್ಥಳ ಪರಿಶೀಲನೆ ಮಾಡಿ ನ್ಯಾಯಾಧೀಶ ರೊಂದಿಗೆ ಮತ್ತು ವಕೀಲರೊಂದಿಗೆ ಸಂವಾದ ನಡೆಸಿದರು. ಈ ಸಂಧರ್ಭದಲ್ಲಿ ವಕೀಲರ ಸಂಘದ…

    Spread the love

    You Missed

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 52 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    • By admin
    • December 1, 2025
    • 38 views
    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    • By admin
    • November 28, 2025
    • 36 views
    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    • By admin
    • November 28, 2025
    • 32 views
    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    • By admin
    • November 28, 2025
    • 41 views
    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ

    • By admin
    • November 28, 2025
    • 36 views
    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ