ಗ್ರಾಮ ಪಂಚಾಯ್ತಿ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಮಹತ್ವದ ಸೂಚನೆ!

ಬೆಂಗಳೂರು: ರಾಜ್ಯದ ಒಟ್ಟು 6,025 ಗ್ರಾಮ ಪಂಚಾಯಿತಿಗಳ ಪೈಕಿ 5,800 ಪಂಚಾಯಿತಿಗಳ ಅಧಿಕಾರ ಅವಧಿ ಜೂನ್ ತಿಂಗಳಲ್ಲೇ ಮುಗಿದಿದ್ದು, ನಿಯಮದ ಪ್ರಕಾರ ಅಧಿಕಾರವದಿ ಕೊನೆಗೊಳ್ಳುವ ಮುನ್ನವೇ ಚುನಾವಣೆ ನಡೆಸಬೇಕು.

ಆದರೆ ಕೊರೋನಾ ಭೀತಿಯಿಂದ ಮುಂದೂಡಲಾಗಿದ್ದು. ಇದೀಗ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ ಎಲ್ಲಾ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ.

ಕೊರೋನಾ ಭೀತಿ ನಡುವೆಯೂ ಕರ್ನಾಟಕದಲ್ಲಿ ಚುನಾವಣೆಗೆ ಮುಹೂರ್ತ ಫಿಕ್ಸ್!!!!

ಕಂದಾಯ ಇಲಾಖೆಗೆ ಮಹತ್ವದ ಸೂಚನೆ
ಕಂದಾಯ ಇಲಾಖೆಯಲ್ಲಿನ ಅಧಿಕಾರಿಗಳ ವರ್ಗಾವಣೆಗೆ ರಾಜ್ಯ ಚುನಾವಣೆ ಆಯೋಗ ಬ್ರೆಕ್‌ ಹಾಕಿದೆ. ಗ್ರಾಮ ಪಂಚಾಯತಿ ಚುನಾವಣಾ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಸಿದ್ದತಾ ಕಾರ್ಯ, ಚುನಾವಣಾ ಪೂರ್ವಭಾವಿ ತಾಯಾರಿಗಳನ್ನ ಮಾಡಿಕೊಳ್ಳಬೇಕಿರುವುದರಿಂದ
ಕಂದಾಯ ಇಲಾಖೆಯಲ್ಲಿ ಯಾವುದೇ ಅಧಿಕಾರಿಗಳನ್ನ ಹಾಗೂ ಸಿಬ್ಬಂದಿಗಳ ವರ್ಗವಾಣೆ ಮಾಡದಂತೆ ರಾಜ್ಯ ಸರ್ಕಾರ ಖಡಕ್ ಸೂಚನೆ ರವಾನಿಸಿದೆ.

ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ತಾಲೂಕು ಹಾಗೂ ಜಿಲ್ಲೆಗಳಲ್ಲಿ ಪೂರ್ವಭಾವಿ ತಯಾರಿಗಳು ನಡೆಯುತ್ತಿವೆ. ಈ ಕಾರ್ಯಗಳಿಗೆ ತೊಡಕಾಗದಂತೆ 2020 ಸೆಪ್ಟೆಂಬರ್ 25ರ ನಂತರ ಕಂದಾಯ ಇಲಾಖೆಯ ಯಾವುದೇ ಅಧಿಕಾರಿ/ಸಿಬ್ಬಂದಿಗಳ ವರ್ಗಾವಣೆ ಆದೇಶ ಹೊರಡಿಸದಂತೆ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಚುನಾವಣೆ ಅಧೀನ ಕಾರ್ಯದರ್ಶಿ, ಕಂದಾಯ ಇಲಾಖೆಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಅಕ್ಟೋಬರ್‌ ಕೊನೆಯಲ್ಲಿ ಎಲೆಕ್ಷನ್..?
ರಾಜ್ಯದಲ್ಲಿ ಗ್ರಾಮ ಪಂಚಾಯತ್‌ ಚುನಾವಣೆ ಘೋಷಿಸುವ ಸಂಬಂಧ 2020ರ ಅಕ್ಟೋಬರ್‌ ಮೊದಲ ವಾರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಈಗಾಗಲೇ ರಾಜ್ಯ ಚುನಾವಣ ಆಯೋಗ ಹೈಕೋರ್ಟ್‌ಗೆ ತಿಳಿಸಿದೆ.

ಅದರಂತೆ ಈಗ ವಾರ್ಡ್‌ಗಳ ಮೀಸಲಾತಿಯನ್ನು ಪ್ರಕಟಿಸಲಾಗಿದ್ದು, ಚುನಾವಣೆ ಎಲ್ಲಾ ತಯಾರಿ ನಡೆಸಿದೆ. ಇತ್ತ ರಾಜಕೀಯ ನಾಯರು ಸಹ ತಳಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಮೀಸಲಾತಿ ಪ್ರಕಾರ ಅಭ್ಯರ್ಥಿಗಳ ಹುಡುಕಾಟ ನಡೆಸಿದ್ದಾರೆ.

ಎಲ್ಲವೂ ಅಂದುಕೊಂಡಂತೆ ಆದರೆ ಅಕ್ಟೋಬರ್‌ನಲ್ಲೇ ಚುನಾವಣೆ ನಡೆಯುವುದು ಸಾಧ್ಯತೆಗಳು ಹೆಚ್ಚಿವೆ. ಅದಕ್ಕೆ ಕೊರೋನಾ ಮಾರ್ಗಸೂಚಿಗಳನ್ನ ಸಹ ಈಗಾಗಲೇ ಕೇಂದ್ರ ಚುನಾವಣೆ ಆಯೋಗ ಪ್ರಕಟಿಸಿದೆ

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 344 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 303 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 202 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 302 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 160 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 90 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ