ಕೊರೋನಾ ಪಾಸಿಟಿವ್ ಬಂದ ಯುವತಿಯನ್ನು 13 ದಿನಗಳ ಕಾಲ ಗ್ರಾಮದಿಂದ ಹೊರಗಿಟ್ಟ ಗ್ರಾಮಸ್ಥರು!

ಹೈದರಾಬಾದ್​: ಮಹಾಮಾರಿ ಕರೊನಾ ವೈರಸ್​ ಸೋಂಕು ಬಂದ ಮಾತ್ರಕ್ಕೆ ಅಂತಹ ವ್ಯಕ್ತಿಯನ್ನು ಯಾರು ಸಹ ಅತ್ಯಂತ ಕೀಳಾಗಿ ನೋಡಬಾರದು. ಸಾಮಾನ್ಯರಂತೆಯೇ ಅವರೊಬ್ಬ ರೋಗಿಯೇ ಹೊರತು ತೀರ ಬೇಡವಾದವರು ಎಂಬಂತೆ ನೋಡಬಾರದು ಎಂದು ಎಷ್ಟೇ ಅರಿವು ಮೂಡಿಸಿದರು ಅಂತಹ ಕಹಿ ಘಟನೆಗಳು ಮರುಕಳಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯೇ ಸರಿ.

ಕರೊನಾ ಸೋಂಕು ಬಂದಿದ್ದಕ್ಕೆ ಪಿಯು ವಿದ್ಯಾರ್ಥಿನಿಯೊಬ್ಬಳನ್ನು ಸುಮಾರು 13 ದಿನಗಳ ಕಾಲ ಬಲವಂತವಾಗಿ ಊರಿನಿಂದ ಹೊರಹಾಕಿದ್ದು, ಟೆಂಟ್​ನಲ್ಲಿ ಪ್ರತ್ಯೇಕವಾಗಿ ವಾಸಿಸುವಂತೆ ಗ್ರಾಮಸ್ಥರು ಒತ್ತಾಯ ಮಾಡಿರುವ ಘಟನೆ ತೆಲಂಗಾಣದ ಆದಿಲ್​ಬಾದ್​ ಜಿಲ್ಲೆಯಲ್ಲಿ ನಡೆದಿದೆ.


ಘಟನೆ ಬಗ್ಗೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಜಿ. ಕಿಸನ್​ ರೆಡ್ಡಿ ಅವರು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ವೈದ್ಯಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದರು. ಅಲ್ಲದೆ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತೆಲಂಗಾಣ ಡಿಜಿಪಿ ಮತ್ತು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೆ ಕೇಂದ್ರ ಸಚಿವರು ಸೂಚನೆ ನೀಡಿದ್ದಾರೆ.

ಕೋವಿಡ್​ ರೋಗಿಗಳನ್ನು ಬಹಿಷ್ಕರಿಸುವುದು ಅಮಾನವೀಯ. ಕರೊನಾ ವಿರುದ್ಧ ಹೋರಾಡುವಾಗ ಒಬ್ಬರಿಗೊಬ್ಬರು ಸಹಕಾರ ನೀಡಿ, ಮುಂದೆ ಸಾಗಬೇಕು. ಕರೊನಾ ಬಂದಿದ್ದಕ್ಕೆ ಹುಡುಗಿಯನ್ನು ಹೊರಹಾಕಿದ ಘಟನೆ ದುರಾದೃಷ್ಟಕರ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ತೆಲಂಗಾಣ ಡಿಜಿಪಿ ಮತ್ತು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೆ ಸೂಚನೆ ನೀಡಿದ್ದೇನೆಂದು ಕಿಸನ್​ ರೆಡ್ಡಿ ಅವರು ಟ್ವೀಟ್​ ಮಾಡಿದ್ದಾರೆ.

ಕರೊನಾ ಪಾಸಿಟಿವ್​ ಆಗಿದ್ದಕ್ಕೆ ನಿರ್ಮಲ್​ ಜಿಲ್ಲೆಯ ಮುಧೋಳ್​ನಲ್ಲಿರುವ ತೆಲಂಗಾಣ ಬುಡಕಟ್ಟು ಕಲ್ಯಾಣ ವಸತಿ ಕಾಲೇಜಿನಿಂದ ಸಲೆಗುಡ ಗ್ರಾಮದ ತನ್ನ ಮನೆಗೆ ಮಾರ್ಚ್​ 19ರಂದು ಹುಡುಗಿ ವಾಪಸಾದಾಗ ಗ್ರಾಮಸ್ಥರು ಆಕೆಗೆ ಅನುಮತಿ ನೀಡಲಿಲ್ಲ. ಇತರರಿಗೆ ಸೋಂಕು ಅಂಟಿಸಿಬಿಡುತ್ತಾಳೆ ಎಂಬ ಭಯದಿಂದ ಹುಡುಗಿಗೆ ಗ್ರಾಮದ ಒಳಗೆ ಬರಲು ಅನುಮತಿಯನ್ನೇ ನೀಡಲಿಲ್ಲ.

ಆದಾಗ್ಯು, ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳು, ಗ್ರಾಮಸ್ಥರಿಂದ ಯಾವುದೇ ಒತ್ತಾಯವಿಲ್ಲದೆ ಹುಡುಗಿ ಸ್ವಯಂಪ್ರೇರಣೆಯಿಂದ ಪ್ರತ್ಯೇಕತೆವಾಗಿದ್ದಾಳೆ ಅಂದುಕೊಂಡರು. ಮಂಗಳವಾರ ಎರಡನೇ ಪರೀಕ್ಷೆ ನಡೆಸಿದ ಅಧಿಕಾರಿಗಳು ಹುಡುಗಿಗೆ ನೆಗಿಟಿವ್​ ವರದಿ ಬಂದಾಗ ಮನೆಗೆ ಕಳುಹಿಸಿಕೊಡಲಾಯಿತು.

ಈ ವಿಚಾರದಲ್ಲಿ ಪರ-ವಿರೋಧ ಚರ್ಚೆಗಳು ಸಹ ಕೇಳಿಬರುತ್ತಿದೆ. ಕೆಲವರು ಸ್ವತಃ ಹುಡುಗಿಯೇ ಪ್ರತ್ಯೇಕವಾಗಿದ್ದಳು. ಗ್ರಾಮಸ್ಥರು ಸಹ ಕಾಲ ಕಾಲಕ್ಕೆ ಆಹಾರ ನೀಡುವ ಮೂಲಕ ಸಹಕಾರ ನೀಡಿದ್ದಾರೆ ಎಂದು ಕೆಲ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ. ಆದರೆ, 13 ದಿನಗಳ ಕಾಲ ಯುವತಿಯನ್ನು ಏಕಾಂಗಿಯಾಗಿ ಊರಿನ ಹೊರಭಾಗದಲ್ಲಿ ಇರಿಸಿದ್ದು ಸರಿಯಲ್ಲ ಎಂದು ಅನೇಕರು ಅಸಮಾಧಾನ ಹೊರಹಾಕಿದ್ದಾರೆ.

Spread the love
  • Related Posts

    ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ

    ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸ್ವ ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ 15.10.24 ರಿಂದ 24.10.24ರ ವರೆಗೆ (10ದಿನ) ಪ್ರತಿ…

    Spread the love

    ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ

    ನವರಾತ್ರಿ 9ನೇ ದಿನ: ಸಿದ್ಧಿದಾತ್ರಿ ದೇವಿಯನ್ನು ಈ ಮಂತ್ರಗಳನ್ನು ಹೇಳುತ್ತಾ ಪೂಜಿಸಿದರೆ ಒಳ್ಳೆಯದು ನವರಾತ್ರಿಯ 9ನೇ ಹಾಗೂ ಕೊನೆಯ ದಿನದಂದು ತಾಯಿ ಸಿದ್ಧಿದಾತ್ರಿ ಯ ಪೂಜೆ ಮಾಡಲಾಗುವುದು. ಈ ದಿನವನ್ನು ತುಂಬಾ ಸಂಭ್ರಮ ಹಾಗೂ ಸಡಗರಿಂದ ಆಚರಣೆ ಮಾಡಲಾಗುತ್ತದೆ.ದುರ್ಗಾದೇವಿಯು ಈಶ್ವರ ದೇವರ…

    Spread the love

    You Missed

    ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

    • By admin
    • October 16, 2024
    • 31 views
    ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

    ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ

    • By admin
    • October 11, 2024
    • 59 views
    ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ

    ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ

    • By admin
    • October 11, 2024
    • 25 views
    ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ

    ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

    • By admin
    • October 7, 2024
    • 81 views
    ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

    ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ

    • By admin
    • October 2, 2024
    • 44 views
    ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು

    • By admin
    • October 1, 2024
    • 428 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು