ಭಾರಿ ವಿವಾದಕ್ಕೆ ಕಾರಣವಾಯ್ತ ಫ್ರೀ ವೆಡ್ಡಿಂಗ್ ಪೋಟೊಶೂಟ್! ಹಿಂದೂ ಧರ್ಮಿಯರಿಗೆ ಪವಿತ್ರವಾದ ಋಷಿ ಪರಂಪರೆಗೆ ಅವಮಾನ!

ಕೇರಳ: ಫ್ರೀ ವೆಡ್ಡಿಂಗ್ ಪೋಟೊಶೂಟ್ ಹಾಗೂ ಕಾನ್ಸೆಪ್ಟ್ ಪೋಟೋ ಶೂಟ್ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಮಲೆಯಾಳಂ ಚಲನಚಿತ್ರರಂಗದ ಎವರ್ ಗ್ರೀನ್ ಹಿಟ್ ಚಿತ್ರ ವೈಶಾಲಿಯ ಪಾತ್ರದ ಪ್ರೇರಣೆಯಿಂದ ಮಾಡಿರುವ ಈ ಪೋಟೋ ಶೂಟ್ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕೆಲದಿನಗಳ‌ ಹಿಂದೆ ಕೇರಳದ ಜೋಡಿಯೊಂದು ಕಾಫಿ ತೋಟದಲ್ಲಿ ನಡೆಸಿದ್ದ ಪೋಸ್ಟ್ ವೆಡ್ಡಿಂಗ್ ಹಸಿಬಿಸಿ ಪೋಸಿನ ಪೋಟೋ ಶೂಟ್ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ಕೇರಳದ ಮತ್ತೊಂದು ಜೋಡಿ ನಡೆಸಿದ ಫ್ರೀ ವೆಡ್ಡಿಂಗ್ ಪೋಟೊಶೂಟ್ ಹಾಗೂ ಕಾನ್ಸೆಪ್ಟ್ ಹಿಂದೂ ಧರ್ಮಿಯರ ಕಣ್ಣು ಕೆಂಪಾಗಿಸಿದೆ.

ಋಷಿ ಹಾಗೂ ಋಷಿಮಾತೆಯಂತೆ ವೇಷಭೂಷಣ ಧರಿಸಿದ ಜೋಡಿಯೊಂದು ನದಿತೀರ,ಕಾಡಿನಲ್ಲಿ ರೋಮ್ಯಾನ್ಸ್ ಮಾಡುತ್ತಿರುವಂತೆ ಪೋಸು ನೀಡಿ ಪೋಟೋಶೂಟ್ ಮಾಡಿಸಲಾಗಿದೆ.

ಆದರೇ ಈ ಪೋಟೋ ಶೂಟ್ ನಲ್ಲಿ ಹಿಂದು ಧರ್ಮಿಯರಿಗೆ ಪವಿತ್ರವಾದ ಋಷಿ ಪರಂಪರೆಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಋಷಿಯಂತೆ ವೇಷಭೂಷಣ ಧರಿಸಿದ ಈ ಯುವ ಜೋಡಿ ತೀರಾ ಕೀಳುಮಟ್ಟದ ಭಾವಾಭಿವ್ಯಕ್ತಿ‌ ನೀಡಿದ್ದು ಪೋಟೋಸ್ ವೈರಲ್ ಆಗುತ್ತಿದ್ದಂತೆ ಜನ ಕೆಟ್ಟದಾಗಿ ಕಮೆಂಟ್ ಮಾಡಿದ್ದಲ್ಲದೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪೋಟೋಶೂಟ್ ಹೆಸರಿನಲ್ಲಿ ಹಿಂದೂ ಧರ್ಮಿಯರ ಭಾವನೆಗೆ ಧಕ್ಕೆ ತರಲಾಗಿದೆ ಎಂಬ ಆರೋಪ ಕೇಳಿಬಂದಿದ್ದು ಈ ಜೋಡಿ ವಿರುದ್ಧ ಕ್ರಮಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿದೆ.

ಕೇರಳದ ರಿಗ್ವೆದಾ ಬೂಟಿಕ್ ಸಹಯೋಗದಲ್ಲಿ ನಡೆದ ಈ ಪೋಟೋಶೂಟ್ ನಲ್ಲಿ 1988 ರಲ್ಲಿ ‌ಮಲೆಯಾಳಂನಲ್ಲಿ ರಿಲೀಸ್ ಆದ ವೈಶಾಲಿ ಚಿತ್ರದ ಕಾನ್ಸೆಪ್ಟ್ ಬಳಸಲಾಗಿದೆ ಎನ್ನಲಾಗಿದೆ.

ಪೋಟೋಗ್ರಾಫರ್ ಮಿಧುನ್ ಸರ್ಕಾರ್ ಅವರು ತೆಗೆದಿರುವ ಈ ಪೋಟೋಶೂಟ್ ನಲ್ಲಿ ಪಾಲ್ಗೊಂಡ ಜೋಡಿ ಅಭಿಜಿತ್ ಹಾಗೂ ಜಿತು ಮಕ್ಕು ಮಾಯಾ ಎಂದು ಹೇಳಲಾಗಿದ್ದು, ಇವರು ಮದುವೆಯಾಗಲಿರೋ ಜೋಡಿಯೋ ಅಥವಾ ಫ್ರಿ ವೆಡ್ಡಿಂಗ್ ಶೂಟ್ ಗಾಗಿ ಪೋಸು ಕೊಟ್ಟ ಆರ್ಟಿಸ್ಟ್ ಗಳೋ ಎಂಬುದು ಇನ್ನು ಸ್ಪಷ್ಟವಾಗಿಲ್ಲ.

ಪೋಟೋಗ್ರಾಫಿಯಲ್ಲಿ ಕೇರಳ ಇಡೀ ದೇಶಕ್ಕೆ ವಿಭಿನ್ನವಾಗಿ ಕಾಣಿಸಿಕೊಳ್ಳುತ್ತಿದೆ. ಮದುವೆಯ ಪೋಟೋ ಶೂಟ್ ಗಳಲ್ಲಿ ಅತೀ ಹೆಚ್ಚು ಕ್ರಿಯೆಟಿವಿಟಿಯನ್ನು ಕೇರಳದ ಛಾಯಾಗ್ರಾಹಕರು ತೋರಿಸುತ್ತಿದ್ದು, ಇಡೀ ದೇಶದಲ್ಲಿ ತನ್ನ ಛಾಪನ್ನು ಮೂಡಿಸುತ್ತಿದ್ದಾರೆ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 330 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 301 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 201 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 301 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 159 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 90 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ