ಪುನೀತ್‌ ನಿಧನದ ಬೆನ್ನಲ್ಲೇ ಕೇರಳ ಸರ್ಕಾರದ ಮಹತ್ವದ ನಿರ್ಧಾರ!

ತಿರುವನಂತಪುರಂ: ಕನ್ನಡದ ನಟ ಪುನೀತ್‌ ರಾಜ್‌ಕುಮಾರ್‌ ಅವರ ಹಠಾತ್‌ ನಿಧನದ (Puneeth Rajkumar Death) ಬೆನ್ನಲ್ಲೇ ಕೇರಳ ಸರ್ಕಾರ ರಾಜ್ಯಾದ್ಯಂತ ಇರುವ ಎಲ್ಲ ಜಿಮ್ನಾಷಿಯಂಗಳು, ಕ್ರೀಡಾಂಗಣಗಳು, ಒಳಾಂಗಣ ಕೋರ್ಟ್‌ಗಳಲ್ಲಿ ಮೂಲಭೂತ ಪ್ರಥಮ ಚಿಕಿತ್ಸಾ ಕಿಟ್‌ಗಳು (First Aid Kit) ಸೇರಿದಂತೆ ಸ್ವಯಂಚಾಲಿತ ಬಾಹ್ಯ ಡಿಫಿಬ್ರಿಲೇಟರ್‌- ಎಇಡಿ-ಆಟೋಮೇಟೆಡ್‌ ಎಕ್ಸ್‌ಟರ್ನಲ್‌ ಡಿಫಿಬ್ರಿಲೇಟರ್‌ಗಳನ್ನು (AED-Automated External Defibrillator) ಬಳಕೆಗೆ ಸಿದ್ಧವಾಗಿಟ್ಟುಕೊಳ್ಳುವ ಅವಶ್ಯಕತೆಯನ್ನು ಎತ್ತಿಹಿಡಿದಿದೆ.

ನಗರದ ರಾಯಲ್‌ ಬ್ಯಾಡ್ಮಿಂಟನ್‌ ಕೋರ್ಟಿನಲ್ಲಿ ಶನಿವಾರ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಾರಿಗೆ ಸಚಿವ ಅಂಟೋನಿ ರಾಜು (Antony Raju), ಕೇರಳದ ಕ್ರೀಡಾ ಸಚಿವ ವಿ. ಆಬ್ದುರೆಹಮಾನ್‌ (V.Abdurahiman) ಅವರೊಂದಿಗೆ ಚರ್ಚಿಸಿ ರಾಜ್ಯದಲ್ಲಿ ಇದನ್ನು ತುರ್ತಾಗಿ ಜಾರಿಗೆ ತರುವ ಭರವಸೆಯನ್ನು ನೀಡಿದರು.

ಕನ್ನಡದ ನಟ ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲ ನಿಧನದ ಬಗ್ಗೆ ನಮಗೆ ತಿಳಿದು ಬಂದಿದೆ. ಅವರು ಶುಕ್ರವಾರ ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಎದೆನೋವು ಕಾಣಿಸಿಕೊಂಡಿತ್ತು. ಒಳಾಂಗಣ ಕೋರ್ಟ್‌ಗಳು, ಜಿಮ್‌ಗಳಲ್ಲಿ ಪ್ರಾಥಮಿಕ ಚಿಕಿತ್ಸಾ ಉಪಕರಣಗಳು ಸಿದ್ಧವಾಗಿರದ ಕಾರಣ ಅವರ ಪ್ರಾಣ ಉಳಿಸಲಾಗಲಿಲ್ಲ. ನಮ್ಮ ರಾಜ್ಯದ ಯಾವುದೇ ಕ್ರೀಡಾಪಟು ಈ ರೀತಿಯ ಸಮಸ್ಯೆಯಿಂದ ಬಳಲಬಾರದು. ಈ ನಿಟ್ಟಿನಲ್ಲಿ ಜಿಮ್‌ ಹಾಗೂ ಒಳಾಂಗಣ ಕೋರ್ಟ್‌ಗಳಲ್ಲಿ ಪ್ರಾಥಮಿಕ ಚಿಕಿತ್ಸೆಯ ಉಪಕರಣಗಳನ್ನು ಬಳಕೆಗೆ ಸಿದ್ಧವಾಗಿಡುವುದನ್ನು ಕಡ್ಡಾಯಗೊಳಿಸಬೇಕು. ಸಂಬಂಧಪಟ್ಟಇಲಾಖೆಗಳು ಈ ನಿಟ್ಟಿನಲ್ಲಿ ತುರ್ತುಕ್ರಮವನ್ನು ತೆಗೆದಿಕೊಳ್ಳಬೇಕು ಎಂದು ಅಂಟೋನಿ ಅಭಿಪ್ರಾಯಪಟ್ಟರು.

ನಗರದ ಪ್ರಮುಖ ವೈದ್ಯಕೀಯ ಸಂಸ್ಥೆಯಾದ ನಿಮ್ಸ್ ಮೆಡಿ ಸಿಟಿಯ (NIMS Medi City) ಆಶ್ರಯದಲ್ಲಿ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ ನಡೆಯಿತು. ನಿಮ್ಸ್ ಮೆಡಿ ಸಿಟಿಯ ಮುಖ್ಯಸ್ಥ ಫೈಝಲ್ ಖಾನ್ (Faizal Khan)ಮಾತನಾಡಿ, ವಿವಿಧ ಸಂಸ್ಥೆಗಳ ಪ್ರತಿನಿಧಿಗಳಿಗೆ ಪ್ರಥಮ ಚಿಕಿತ್ಸಾ ಸೌಲಭ್ಯದ ಬಗ್ಗೆ ಉಚಿತ ತರಬೇತಿ ನೀಡಲು ತಮ್ಮ ಆಸ್ಪತ್ರೆ ಸಿದ್ಧವಾಗಿದೆ ಎಂದು ಹೇಳಿದರು.

ಪ್ರಥಮ ಚಿಕಿತ್ಸೆ ತರಬೇತಿ ಎಲ್ಲರಿಗೂ ನೀಡಲಾಗುವುದು!

“ಸಾಮಾನ್ಯ ಜನರಿಗೆ ಮೂಲಭೂತ ಪ್ರಥಮ ಚಿಕಿತ್ಸೆಯಲ್ಲಿ ಒಂದು ದಿನದ ತರಬೇತಿ ನೀಡಬೇಕಾಗಿದೆ. ನಾವು ಈಗಾಗಲೇ ಇಂತಹ ಕಾರ್ಯಕ್ರಮವನ್ನು ಅಯೋಜಿಸಿದ್ದೇವೆ ಮತ್ತು ಈಗ ನಟ ಪುನೀತ್ ರಾಜ್‌ಕುಮಾರ್ ಅವರ ನಿಧನದ ದುಃಖದ ಸುದ್ದಿಯೊಂದಿಗೆ, ನಾವು ಈ ಪ್ರಥಮಚಿಕಿತ್ಸಾ ತರಬೇತಿ ಕಾರ್ಯಕ್ರಮವನ್ನು ದೊಡ್ಡ ಮಟ್ಟದಲ್ಲಿ ಆಯೋಜಿಸಲು ನಿರ್ಧರಿಸಿದ್ದೇವೆ. ತರಬೇತಿ ಕಾರ್ಯಕ್ರಮಕ್ಕ ಪಾಲ್ಗೊಳ್ಳುವ ಎಲ್ಲರಿಗೂ ನಾವು ಉಚಿತ ಕಿಟ್‌ಗಳು ಮತ್ತು ಪ್ರಮಾಣಪತ್ರವನ್ನು ನೀಡುತ್ತೇವೆ. ತರಬೇತಿ ಕಾರ್ಯಕ್ರಮವನ್ನು ಈ ಕ್ಷೇತ್ರದ ಪರಿಣಿತರು ನೀಡುತ್ತಾರೆ ಮತ್ತು ತರಬೇತಿ ಪಡೆದವರು ಅದನ್ನು ಇತರರೊಂದಿಗೆ ಹಂಚಿಕೊಳ್ಳಬಹುದು” ಎಂದು ಖಾನ್ ಹೇಳಿದರು.

ರಾಯಲ್ ಬ್ಯಾಡ್ಮಿಂಟನ್ ಕೋರ್ಟ್ ಮಾಲಿಕ ಆದಿತ್ಯ ವರ್ಮಾ (Aditya Varma) ಅವರು ಎಲ್ಲಾ ಮೂಲಭೂತ ಪ್ರಥಮ ಚಿಕಿತ್ಸಾ ಕಿಟ್‌ಗಳನ್ನು ತಮ್ಮ ಬ್ಯಾಡ್ಮಿಂಟನ್‌ ಕೋರ್ಟಿನಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳುವುದಾಗಿ ಘೋಷಿಸಿದರು.”ನಾನು 14 ವರ್ಷಗಳ ಹಿಂದೆ ಕೊಲ್ಲಂ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನನ್ನ ತಂದೆಯನ್ನು ಕಳೆದುಕೊಂಡೆ. ಅಪಘಾತದ ನಂತರ ಅವರನ್ನು ತಡವಾಗಿ ಆಸ್ಪತ್ರೆಗೆ ಕರೆತರಲಾಯಿತು. ಬಹುಶಃ, ಅವರನ್ನು ಆಸ್ಪತ್ರೆಗೆ ಕರೆದೊಯ್ದವರಿಗೆ ಪ್ರಾಥಮಿಕ ಚಿಕಿತ್ಸೆಯ ಬಗ್ಗೆ ಸ್ವಲ್ಪ ಜ್ಞಾನವಿದ್ದರೆ, ಅವರ ಜೀವಂತವಿರುತ್ತಿದ್ದರು ಈಗ ಕನ್ನಡ ನಟನ ಹಠಾತ್ ನಿಧನದಿಂದ, ಮೂಲಭೂತ ಪ್ರಥಮ ಚಿಕಿತ್ಸಾ ತರಬೇತಿಯನ್ನು ನೀಡುವ ಯೋಜನೆಯ್ನು ಡೊಡ್ಡ ಮಟ್ಟದಲ್ಲಿ ಕೊಂಡೊಯ್ಯುವ ಪಾತ್ರವನ್ನು ನಾನು ತೆಗೆದುಕೊಳ್ಳುತ್ತೇನೆ” ಎಂದು ವರ್ಮಾ ಹೇಳಿದರು.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 65 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 194 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 28 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 21 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 18 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 45 views
    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ