ಕೋವಿಡ್-19 ರೋಗಿಗಳಿಗೆ ಜೀವರಕ್ಷಕವಾಗಿರುವ ‘ರೆಮ್ ಡೆಸಿವಿರ್’ ದರ ಇಳಿಕೆ

ನವದೆಹಲಿ: ಕೋವಿಡ್-19 ರೋಗಿಗಳಿಗೆ ಜೀವರಕ್ಷಕ ವಾಗಿರುವ ರೆಮ್ ಡೆಸಿವಿರ್ ನ ಪ್ರತಿ ಇಂಜೆಕ್ಷನ್ ಬೆಲೆಯನ್ನು ಕೇಂದ್ರ ಸರ್ಕಾರ 2000 ರೂಪಾಯಿಯಷ್ಟು ಕಡಿತ ಮಾಡಿದೆ. ಕೇಂದ್ರ ರಾಸಾಯನಿಕ ರಸಗೊಬ್ಬರಗಳ ಸಚಿವಾಲಯ ಔಷಧ ವಿಭಾಗದ ಸದಸ್ಯ ಸಲಹೆಗಾರ ಡಾ. ವಿನೋದ್ ಕೊತ್ವಾಲ್ ಅವರು ಶನಿವಾರ ಈ ಡ್ರಗ್ ಇಂಜೆಕ್ಷನ್ ನ ಬೆಲೆಗಳ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಇನ್ನು ಯಾವುದರ ಬೆಲೆ ಎಷ್ಟು?!

ಆ್ಯಂಟಿ ವೈರಲ್ ಔಷಧಿಯನ್ನು 899 ರೂಪಾಯಿಗೆ ಮಾರಾಟ ಮಾಡಲಾಗುತ್ತದೆ.

ಕ್ಯಾಡಿಲಾ ಹೆಲ್ತ್ ಕೇರ್ ಲಿಮಿಟೆಡ್ REMDAC 2,800 ರೂ.ನಿಂದ 899 ರೂ. ವರೆಗೆ

ಸಿಂಜೀನ್ ಇಂಟರ್ನ್ಯಾಷನಲ್ ಲಿಮಿಟೆಡ್(ಬಯೋಕಾನ್ ಬಯೋಲಾಜಿಕ್ಸ್ ಇಂಡಿಯಾ) ರೆಮೈನ್ 3,950 ರೂ.ನಿಂದ 2,450 ರೂ.

ಡಾ. ರೆಡ್ಡಿಸ್ ಲ್ಯಾಬೊರೇಟರೀಸ್ ಲಿಮಿಟೆಡ್ ರೆಡಿಎಕ್ಸ್ 5,400 ರೂ.ನಿಂದ 2,700 ರೂ.ಗೆ

ಸಿಪ್ಲಾ ಲಿಮಿಟೆಡ್ ಸಿಪ್ರೆಮಿ 4,000 ರೂ.ನಿಂದ 3,000 ರೂ.ವರೆಗೆ

ಮೈಲಾನ್ ಫಾರ್ಮಾಸ್ಯುಟಿಕಲ್ಸ್ ಪ್ರೈವೇಟ್ ಲಿಮಿಟೆಡ್ ಡೆಸೆಮ್ 4,800 ರೂ.ನಿಂದ 3,400 ರೂ.ವರೆಗೆ

ಜುಬಿಲೆಂಟ್ ಜೆನೆರಿಕ್ಸ್ ಲಿಮಿಟೆಡ್ ಜುಬಿ-ಆರ್ 4,700 ರೂ.ನಿಂದ 3,400 ರೂ. ಗೆ

ಹೆಟೆರೊ ಹೆಲ್ತ್ ಕೇರ್ ಲಿಮಿಟೆಡ್ COVIFOR 5,400 ರೂ.ನಿಂದ 3,490 ರೂ.ಗೆ ಇಳಿಕೆಯಾಗಿದೆ.

ದೇಶದಲ್ಲಿ ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಹೋರಾಡುತ್ತಿದ್ದಂತೆ ಇಂಜೆಕ್ಷನ್ ತಯಾರಕರು ಆಂಟಿ-ವೈರಲ್ ಡ್ರಗ್ ರೆಮ್ ಡೆಸಿವಿರ್ ಕೊರತೆಯ ಮಧ್ಯೆ ಕೂಡ ಮಾನವೀಯವಾಗಿ ಯೋಚಿಸಿ ಬೆಲೆಯನ್ನು ಕಡಿತಗೊಳಿಸಿದ್ದಾರೆ. ಉತ್ಪಾದನೆ ಮತ್ತು ಪೂರೈಕೆಯ ಹೆಚ್ಚಳ ಮತ್ತು ರೆಮ್ ಡೆಸಿವಿರ್ ಚುಚ್ಚುಮದ್ದಿನ ಬೆಲೆಯನ್ನು ಕಡಿಮೆ ಮಾಡಲು ಚರ್ಚಿಸಲು ಕೇಂದ್ರವು ಅಸ್ತಿತ್ವದಲ್ಲಿರುವ ಎಲ್ಲಾ ಔಷಧ ತಯಾರಕರೊಂದಿಗೆ ಸಭೆ ನಡೆಸಿದ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ.

ಆಂಟಿ-ವೈರಲ್ ಔಷಧ ರೆಮ್ ಡೆಸಿವಿರ್ ಗೆ ಬೇಡಿಕೆ ಹೆಚ್ಚಾಗಿದೆ. ಕೇಂದ್ರವು ಏಪ್ರಿಲ್ 11 ರಂದು ರೆಮ್ ಡೆಸಿವಿರ್ ಮತ್ತು ಇತರೆ ಸಕ್ರಿಯ ಔಷಧ ಪದಾರ್ಥಗಳ ರಫ್ತು ನಿಷೇಧಿಸಿತ್ತು. ಕೊರೋನಾ ಪರಿಸ್ಥಿತಿ ಸುಧಾರಿಸುವವರೆಗೆ ರೆಮ್ ಡೆಸಿವಿರ್ ಇಂಜೆಕ್ಷನ್ ಮತ್ತು ರೆಮ್ ಡೆಸಿವಿರ್ ಆಕ್ಟಿವ್ ಫಾರ್ಮಾಸ್ಯುಟಿಕಲ್ ಪದಾರ್ಥಗಳ ರಫ್ತು ನಿಷೇಧ ಜಾರಿಯಲ್ಲಿರಲಿದೆ ಎಂದು ಆರೋಗ್ಯ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 15 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 52 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 41 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ