ರಾಜ್ಯಾದ್ಯಂತ ಮಧ್ಯಪ್ರೀಯರಿಗೆ ಬಿಗ್ ಶಾಕ್! ಗ್ರಾ.ಪಂ ಚುನಾವಣಾ ಮತ ಎಣಿಕೆ ಹಿನ್ನೆಲೆ ನಾಳೆ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ

ಬೆಂಗಳೂರು: ಎರಡು ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ಯಶಸ್ವಿಯಾಗಿ ನಡೆದಿದ್ದು,ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಗಳಲ್ಲಿ ಭದ್ರವಾಗಿದೆ.ಗ್ರಾಮೀಣ ಭಾಗದಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿ ನಡೆಯುತ್ತಿದ್ದು, ಫ‌ಲಿತಾಂಶ ಹೊರ ಬೀಳಲು ಕೆಲವೇ ಗಂಟೆಗಳು ಬಾಕಿ ಉಳಿದಿವೆ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ-2020ರ ಸಂಬಂಧ ಎಲ್ಲಾ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಡಿಸೆಂಬರ್ 29 ರಂದು ಮಧ್ಯರಾತ್ರಿ 12 ಗಂಟೆಯಿಂದ ಡಿಸೆಂಬರ್ 30 ರ ಮಧ್ಯರಾತ್ರಿ 12 ಗಂಟೆಯವರೆಗೆ 144 ರಂತೆ ನಿಷೇಧಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳಲ್ಲಿ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಯಾವುದೇ ಮೆರವಣಿಗೆ, ವಿಜಯೋತ್ಸವ, ಬಹಿರಂಗ ಸಭೆ-ಸಮಾರಂಭಗಳನ್ನು ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಾಸ್ತಾ-ರೋಖ ಹಾಗೂ ಮುತ್ತಿಗೆ ನಡೆಸುವುದನ್ನು ನಿಷೇಧಿಸಲಾಗಿದೆ.

ಶಸ್ತ್ರಗಳು, ದೊಣ್ಣೆ, ಕತ್ತಿ, ಈಟಿ, ಗದೆ, ಬಂದೂಕು, ಚಾಕು, ಕೋಲು, ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಯಾವುದೇ ಸಂರಕ್ಷಾರ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ, ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕ ಸುವ್ಯಸವ್ಥೆಗೆ ಭಾದೆಯನ್ನುಂಟು ಮಾಡಬಹುದಾದ, ರಾಜ್ಯದ ಭದ್ರತೆಯನ್ನು ಕಡೆಗಣಿಸಬಹುದಾದ ಅಥವಾ ಅಪರಾಧವನ್ನು ಮಾಡಲು ಪ್ರಚೋಧಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಡ ನಿಷೇಧಿಸಲಾಗಿದೆ. ಹಾಡು, ಸಂಗೀತ, ಆವೇಶ ಭಾಷಣ, ಇಂಗಿತ ಸೂಚನೆಗಳು, ಅಂಕ ನಿರೂಪಣೆಗಳು, ಚಿತ್ರಗಳನ್ನು, ಸಂಕೇತಗಳನ್ನು ಭಿತ್ತಿ ಪತ್ರಗಳನ್ನು ಇತರ ಯಾವುದೇ ವಸ್ತು ಅಥವಾ ಪದಾರ್ಥವನ್ನು ತಯಾರಿಸುವುದು, ಪ್ರದರ್ಶಿಸುವುದನ್ನು ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Spread the love
  • Related Posts

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ್ದು ಸಂಚಾರಕ್ಕೆ ತೊಡಕಾಗಿದ್ದು ತಕ್ಷಣವೇ ಕಾರ್ಯಪ್ರವೃತ್ತರಾದ ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಸಂಚಾರಕ್ಕೆ ಅನುವುಮಾಡಿಕೊಡಲಾಗಿದೆ. Spread the love

    Spread the love

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಬೆಳ್ತಂಗಡಿ : ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆದೇಶ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹವಮಾನ ಇಲಾಖೆಯ…

    Spread the love

    You Missed

    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    • By admin
    • June 1, 2025
    • 20 views
    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    • By admin
    • June 1, 2025
    • 133 views
    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    • By admin
    • May 31, 2025
    • 98 views
    ಭಾರಿ  ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    • By admin
    • May 30, 2025
    • 70 views
    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    • By admin
    • May 30, 2025
    • 76 views
    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ

    • By admin
    • May 27, 2025
    • 55 views
    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ