ಶಕ್ತಿ ಯೋಜನೆಯಲ್ಲಿ ಉಚಿತ ಪ್ರಯಾಣಕ್ಕೂ ಸಿಗಲಿದೆ ಟಿಕೆಟ್

ಬೆಂಗಳೂರು: ಕಾಂಗ್ರೆಸ್ ಪಕ್ಷ​ ಅಧಿಕಾರ ಬಂದ ಕೂಡಲೇ ಚುನಾವಣೆಗೂ ಮುನ್ನ ಘೋಷಿಸಿದ್ದ ಶಕ್ತಿ ಯೋಜನೆಯನ್ನು ಜಾರಿಗೆ ತರಲು ಸಕಲ ತಯಾರಿ ಮಾಡಿಕೊಳ್ಳುತ್ತಿದೆ. ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ಕಲ್ಪಿಸುವುದು ಈ ಶಕ್ತಿ ಯೋಜನೆಯ ಉದ್ದೇಶವಾಗಿದೆ.

ಜೂನ್​ 11ರಂದು ಈ ಯೋಜನೆ ಜಾರಿಗೆ ಬರಲಿದೆ. ಅಂದು ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಂದಿನಿಂದ ಮಹಿಳೆಯರು ರಾಜ್ಯದ್ಯಂತ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಸರ್ಕಾರ ಕೆಲವು ಷರತ್ತುಗಳನ್ನು ಹಾಕಿದೆ. ಬಸ್ ಸೇವೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿರುತ್ತದೆ. ರಾಜ್ಯದ ಒಳಗೆ ಮಾತ್ರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಎಕ್ಸ್‌ಪ್ರೆಸ್ ಬಸ್​ನಲ್ಲಿ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಬಿಎಂಟಿಸಿ ಮತ್ತು ಕೆಎಸ್​ಆರ್​​ಟಿಸಿ ಬಸ್​ನಲ್ಲಿ ಅವಕಾಶ ಇದೆ. ಎಸಿ ಮತ್ತು ಐಷಾರಾಮಿ ಬಸ್​ಗಳಲ್ಲಿ ಉಚಿತ ಪ್ರಯಾಣವಿಲ್ಲ. ರಾಜಹಂಸ ಬಸ್​ನಲ್ಲಿಯೂ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಇರುವುದಿಲ್ಲ. ಅಂತಾರಾಜ್ಯ ಪ್ರಯಾಣಕ್ಕೆ ಉಚಿತ ಸೌಲಭ್ಯ ಇರುವುದಿಲ್ಲ.

ಉಚಿತ ಪ್ರಯಾಣದ ವೇಳೆ ಮಹಿಳೆರಿಗೆ ಟಿಕೆಟ್​ ಕೊಡುತ್ತಾರಾ? ಅಥವಾ ಯಾವುದಾದರೂ ದಾಖಲೆ ತೆಗೆದುಕೊಂಡು ಹೋಗಬೇಕಾ ಎಂಬ ಗೊಂದಲ ಮಹಿಳೆಯರಲ್ಲಿದೆ. ಆದರೆ, ಆ ಗೊಂದಲಕ್ಕೆ ಈಗ ತೆರೆಬಿದ್ದಿದೆ. ಉಚಿತ ಪ್ರಯಾಣ ಹಿನ್ನೆಲೆಯಲ್ಲಿ ಬಸ್​ನಲ್ಲಿ ಟಿಕೆಟ್ ಪಡೆಯುವ ಗೋಜಿಲ್ಲ ಅಂತ ಮಹಿಳೆಯರು ಅಂದುಕೊಳ್ಳಬೇಡಿ. ಏಕೆಂದರೆ, ಕಂಡಕ್ಟರ್​ ಮಹಿಳೆಯರಿಗೂ ಟಿಕೆಟ್ ಕೊಡುತ್ತಾರೆ.

ಯಾವ ರೀತಿ ಇರುತ್ತೆ ಟಿಕೆಟ್?
ಯೋಜನೆ ಜಾರಿಗೂ ಮೊದಲು ನಾಲ್ಕು ನಿಗಮಗಳಲ್ಲೂ ಇದಕ್ಕಾಗಿ ಭಾರೀ ತಯಾರಿ ಕೂಡ ನಡೆಯುತ್ತಿದೆ. ಶಕ್ತಿ ಯೋಜನೆಯ ಹೊಸ ಟಿಕೆಟ್ ಈಗ ರಚನೆಯಾಗಿದೆ. ಟಿಕೆಟ್​ ಮೇಲೆ “ಮಹಿಳಾ ಪ್ರಯಾಣಿಕರ ಉಚಿತ ಚೀಟಿ ಶಕ್ತಿ ಯೋಜನೆ” ಎಂದು ಬರೆದಿರುತ್ತಾರೆ ಮತ್ತು ಟಿಕೆಟ್​ನಲ್ಲಿ ಯಾವುದೇ ಬೆಲೆ ನಮೂದಾಗುವುದಿಲ್ಲ. ಮಾಮೂಲಿಯಂತೆ ಕಂಡಕ್ಟರ್​ ಬಳಿ ಟಿಕೆಟ್​ ಪಡೆದುಕೊಳ್ಳಬೇಕು. ಆದರೆ, ಬದಲಾವಣೆ ಏನೆಂದರೆ, ಹಣ ಕೊಡುವಂತಿಲ್ಲ

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 289 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 298 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 199 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 299 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ