ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ 11 ಉತ್ಪನ್ನಗಳು ಲೋಕಾರ್ಪಣೆ

ಬೆಂಗಳೂರು:‌ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ 11 ಉತ್ಪನ್ನಗಳ ಲೋಕಾರ್ಪಣೆ ಕಾರ್ಯಕ್ರಮವು ಬೆಂಗಳೂರಿನ ಭಾರತೀಯ ವಿದ್ಯಾ ಭವನದಲ್ಲಿ ನಡೆಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ, ನಟ ರಮೇಶ್ ಅರವಿಂದ್, ನಟಿ ತಾರಾ ಅನುರಾಧ, ಶಾಸಕ ಹರೀಶ್ ಪೂಂಜಾ ಶ್ರೀಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯು ಹೊರ ತಂದಿರುವ 11 ಬಗೆಯ ಸಿರಿ ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.

ಸಿರಿ ಸಂಸ್ಥೆ 13 ಸ್ವಂತ ಮಳಿಗೆ ಹಾಗೂ 300 ಕ್ಕೂ ಹೆಚ್ಚು ಮಾರಾಟ ಮಳಿಗೆಗಳನ್ನು ಹೊಂದಿದೆ. 2 ಸಾವಿರ ಹಳ್ಳಿಯ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಧರ್ಮಸ್ಥಳದ ಸಿರಿ ಸಂಸ್ಥೆ ಪ್ಯಾಕೇಟ್ ಮಾಡಿ, ಮಾರುಕಟ್ಟೆಗೆ ಒದಗಿಸುತ್ತಿದೆ. ರಾಜ್ಯದ ಯಾವುದೇ ಹಳ್ಳಿಯ ಮಹಿಳೆಯರು ಉತ್ಪನ್ನಗಳನ್ನು ತಯಾರಿಸಿ ನೀಡಿದರೆ ಸಿರಿ ಸಂಸ್ಥೆ ಮಾರುಕಟ್ಟೆ ಒದಗಿಸಲಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ತಿಳಿಸಿದರು.

ನಟ ರಮೇಶ್ ಅರವಿಂದ್ ಮಾತನಾಡಿ, ಬ್ರಾಂಡ್, ಬ್ರಾಂಡ್ ವಾಲ್ಯೂ ಹಾಗೂ ಅದರ ಉದ್ದೇಶ, ತಿಳಿದು ಸಿರಿಯ ಉತ್ಪನ್ನವನ್ನು ಕೊಳ್ಳಬೇಕು. ಇದರಿಂದ ಹಳ್ಳಿಯ ಕುಟುಂಬ ಅಭಿವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯೆ ಹಾಗೂ ಹಿರಿಯ ‌ನಟಿ ತಾರಾ ಅನುರಾಧ ಮಾತನಾಡಿ, ಸಿರಿ ಸಂಸ್ಥೆ ಸ್ತ್ರೀ ಕಲ್ಯಾಣಕ್ಕಾಗಿ ಇದೆ. ಮಹಿಳೆಯರಿಗೆ ಆರ್ಥಿಕವಾಗಿ, ಸ್ವಾಭಿಮಾನಕ್ಕಾಗಿ ಇರುವ ಸಂಸ್ಥೆ. ಗ್ರಾಮೋದ್ಯೋಗ, ಕರಕುಶಲ ಗಾಂಧೀಜಿಯವರ ಕನಸು, ಪ್ರಧಾನಿಯವರ ಆತ್ಮ ನಿರ್ಭರ ಭಾರತ ಇವೆಲ್ಲವನ್ನು ರಾಜ್ಯದಲ್ಲಿ ಜಾರಿಗೆ ತಂದವರು ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಎಂದರು.

ಸಿರಿ‌ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಜನಾರ್ಧನ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಿರಿ ಉತ್ಪನ್ನಗಳು ಉತ್ಕೃಷ್ಟ ಗುಣಮಟ್ಟ, ಕಡಿಮೆ ಬೆಲೆಯಲ್ಲಿ ರಾಜ್ಯಾದ್ಯಂತ ಲಭ್ಯವಿದೆ‌. ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ 2004 ರಲ್ಲಿ 20 ಲಕ್ಷ ರೂ. ಬಂಡವಾಳದೊಂದಿಗೆ, ಎರಡು ಸಾವಿರ ಮಹಿಳೆಯರು ಆರಂಭಿಸಿದ ಈ ಸಂಸ್ಥೆ ಈಗ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸುತ್ತಿದೆ. ಸಿರಿ ಸಂಸ್ಥೆ 295 ಹಳ್ಳಿ ಕೇಂದ್ರಗಳಲ್ಲಿ ಉತ್ಪಾದನಾ ಕೇಂದ್ರ ಆರಂಭಿಸಿದೆ ಎಂದರು.

ಲೋಕಾರ್ಪಣೆಯಾದ ಸಿರಿ‌ ಉತ್ಪನ್ನಗಳು:
ಸಿರಿಯ ನೂತನ ಉತ್ಪನ್ನಗಳಾದ ಮೆಣಸಿನ ಪುಡಿ, ಗರಂ ಮಸಾಲ, ರಸಂ ಪುಡಿ, ಸಾಂಬಾರು ಪುಡಿ, ಪುಳಿಯೋಗರೆ, ಬಿಸಿಬೆಳೆಬಾತ್ ಪುಡಿ, ಉಪ್ಮಾ ರೆಡಿ ಮಿಕ್ಸ್, ರವಾ ಇಡ್ಲಿ ಮಿಕ್ಸ್, ಬಾದಾಮ್ ಮಿಕ್ಸ್, ಪುಲಾವ್ ಮಸಾಲ ಬಿಡುಗಡೆ ಮಾಡಲಾಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಧರ್ಮಸ್ಥಳದ ಡಿ. ಸುರೇಂದ್ರ ಕುಮಾರ್, ಸಿರಿ ಗ್ರಾಮೋದ್ಯೋಗ ಸಂಸ್ಥೆ ಟ್ರಸ್ಟಿಗಳಾದ ಶ್ರದ್ಧಾ ಅಮಿತ್, ರಾಮಸ್ವಾಮಿ, ಅರೇಕಾ ಟೀ ಸಂಸ್ಥೆಯ ಸ್ಥಾಪಕ ನಿವೇದನ್ ನೆಂಪೆ, ಕುಸುಮ ದೇವಾಡಿಗ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಿರಿ ಯೋಜನಾಧಿಕಾರಿಗಳಾದ ತಿಮ್ಮಯ್ಯ ನಾಯ್ಕ್, ವಿನ್ಸೆಂಟ್ ಲೋಬೋ ಹಾಗೂ ಸುಧಾಕರ್ ಸಹಕರಿಸಿದರು.

Spread the love
  • Related Posts

    ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

    ಬೆಳ್ತಂಗಡಿ :(ಅ.29) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ 6ನೇ ವರ್ಷದ ದೋಸೆಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಸರ್ಕಾರವು ತಡೆಗೊಳಿಸಿದ ತುಳು ಸಾಮಾಜಿಕ ನೀತಿಬೋಧಕ ನಾಟಕ ಜೈ ಭಜರಂಗ ಬಲಿ ನಾಟಕ ಮತ್ತೊಮ್ಮೆ ಪ್ರದರ್ಶನಗೊಳ್ಳಲಿದೆ.…

    Spread the love

    ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ

    ಗುರುವಾಯನಕೆರೆ: ಪಿಯು ಶಿಕ್ಷಣ ಹಾಗೂ ನೀಟ್, ಜೆಇಇ, ಸಿಇಟಿ, ಎನ್ ಡಿ ಎ, ನಾಟಾ, ಬಿಎಸ್ಸಿ ಅಗ್ರಿ, ವಾಣಿಜ್ಯ ವಿಭಾಗದಲ್ಲಿ ಸಿಎ,ಸಿ ಎಸ್, ಕ್ಲಾಟ್ ಮೊದಲಾದ ಪರೀಕ್ಷೆಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರಾಗಿರುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಕಳೆದ ಬಾರಿಯಂತೆ,…

    Spread the love

    You Missed

    ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

    • By admin
    • October 29, 2025
    • 26 views
    ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ  ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

    ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ

    • By admin
    • October 29, 2025
    • 41 views
    ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ

    ಲಯನ್ಸ್ ಇಂಟರ್ ನ್ಯಾಶನಲ್, ಲಯನ್ಸ್ ಕ್ಲಬ್ ಮತ್ತು ಲಿಯೋಕ್ಲಬ್ ಸಕಲೇಶಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಸಂಸ್ಕೃತಿ ಕಾರ್ಡಿಯಾಕ್ ಸೆಂಟರ್ ಇದರ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • October 25, 2025
    • 25 views
    ಲಯನ್ಸ್ ಇಂಟರ್ ನ್ಯಾಶನಲ್, ಲಯನ್ಸ್ ಕ್ಲಬ್ ಮತ್ತು ಲಿಯೋಕ್ಲಬ್ ಸಕಲೇಶಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಸಂಸ್ಕೃತಿ ಕಾರ್ಡಿಯಾಕ್ ಸೆಂಟರ್ ಇದರ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ:

    • By admin
    • October 25, 2025
    • 18 views
    ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ:

    ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ

    • By admin
    • October 25, 2025
    • 21 views
    ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ

    ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರ, ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ

    • By admin
    • October 24, 2025
    • 67 views
    ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರ, ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ