ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಇದರ ವತಿಯಿಂದ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮವನ್ನು ಗುರುವಾರ ಅಮೃತವರ್ಷಿಣಿ ಸಭಾಭವನದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು “ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ಇಂದು ದೇಶದಲ್ಲಿ ಕೃಷಿ ಕ್ಷೇತ್ರದ ಕ್ರಾಂತಿಯಾಗಿದೆ. ದೇಶದ ಜನರಿಗೆ ಸಾಕಾಗುವಷ್ಟು ಅಕ್ಕಿ, ದವಸ ಧಾನ್ಯ ಉತ್ಪಾದನೆಯಾಗುತ್ತಿದೆ. ರೈತರು ಸಶಕ್ತರಾಗಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರು ಈ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ” ಎಂದರು. ಗ್ರಾಮಾಭಿವೃದ್ಧಿ ಯೋಜನೆಯಿಂದ ಫಲ ಪಡೆದು ಲಾಭಾಂಶವನ್ನು ಸ್ವೀಕರಿಸಿರುವ ಎಲ್ಲರಿಗೂ ವಂದನೆಗಳು. ಇಂಥ ಕಾರ್ಯಕ್ರಮಗಳಿಂದ ಇಂದು ಮಹಿಳೆಯರು ಸ್ವಯಂ ಗೌರವದಿಂದ ನಾವೂ ದುಡಿಯುತ್ತಿದ್ದೇವೆ ಎಂದು ಹೇಳಬಹುದಾಗಿದೆ. ನೀವು ಕೊಡುವ ಹಣ ಲಾಭದ ರೂಪದಲ್ಲಿ ಗೌರವಪೂರ್ವಕವಾಗಿ ನಿಮಗೆ ವಾಪಾಸ್ ಬಂದಿದೆ. ಗ್ರಾಮೀಣ ಅಭಿವೃದ್ಧಿಗೆ ಜನರ ಹಣ ಬಳಕೆಯಾಗುತ್ತಿದೆ. ಕೋವಿಡ್ ಸಮಯದಲ್ಲಿ ಆತ್ಮನಿರ್ಭರ್ ಭಾರತ್ ಘೋಷಣೆ ಮಾಡಿದ ಬಳಿಕ 5 ಮಿನಿ ಬಜೆಟ್‌ಗಳನ್ನು ರಾಷ್ಟ್ರಕ್ಕೆ ಅರ್ಪಿಸಿದ್ದೇವೆ. ಗ್ರಾಮೀಣ ಭಾಗದ ಮಹಿಳೆಯರು ತಮ್ಮ ಗ್ರಾಮದ ಅಭಿವೃದ್ಧಿಗೆ ಕಾರಣರಾಗುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕನಸು ಕೂಡ ಇದೇ ಆಗಿದೆ. ಹೆಣ್ಮಕ್ಕಳು ನಾಯಕತ್ವ ವಹಿಸಿದರೆ ಏನಾಗುತ್ತೆ ಎಂಬುದಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯೇ ಉತ್ತಮ ಉದಾಹರಣೆಯಾಗಿದೆ. ಧರ್ಮಸ್ಥಳ ಇದು ಗ್ರಾಮೀಣ ಯೋಜನೆಯ ಪ್ರಯೋಗಾಲಯ ಎಂದರೆ ತಪ್ಪಾಗದು ಎಂದು ಯೋಜನೆಯ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಬಳಿಕ ಮಾತಾಡಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು, ನಿರ್ಮಲಾ ಸೀತಾರಾಮನ್ ಅವರು ದೇಶದ ಆರ್ಥಿಕ ಮಂತ್ರಿಯಾದರೆ ನಾವು ನಮ್ಮ ಸಂಘದ ಮಹಿಳೆಯರನ್ನು ಆರ್ಥಿಕ ಮಂತ್ರಿಯನ್ನಾಗಿ ಮಾಡಿದ್ದೇವೆ. ಯೋಜನೆಯಲ್ಲಿ 62% ಮಹಿಳೆಯರು ಇದ್ದರೆ 38% ಮಂದಿ ಪುರುಷರು ಇದ್ದಾರೆ. ಮಹಿಳೆಯರನ್ನು ಮಾತ್ರವಲ್ಲದೆ ಗಂಡಸರನ್ನು ನಂಬಿ ಸಾಲ ಕೊಟ್ಟವರು ನಾವು. ಎಲ್ಲ ಸಂಘಗಳು ಶಿಸ್ತುಬದ್ಧವಾಗಿ ಕೆಲಸ ಮಾಡಿದರೆ ಏನು ಪ್ರಯೋಜನವಾಗುತ್ತದೆ ಅನ್ನುವುದಕ್ಕೆ ಲಾಭಾಂಶ ವಿತರಣೆ ಕಾರ್ಯಕ್ರಮ ಸಾಕ್ಷಿ. ಬ್ಯಾಂಕ್ ನಿಮ್ಮನ್ನು ನಂಬಿ ನಮಗೆ ಸಾಲ ಕೊಟ್ಟಿದೆ. ನಾವು ನಿಮ್ಮನ್ನು ನಂಬಿ ಸಾಲ ಕೊಟ್ಟಿದ್ದೇವೆ. ಹೆಣ್ಮಕ್ಕಳ ಕೈಗೆ ಹಣ ಕೊಟ್ಟಲ್ಲಿ ಹಣದ ಸರಿಯಾದ ಬಳಕೆಯಾಗುತ್ತದೆ. ನೀವು ಗೃಹಲಕ್ಷ್ಮಿಯಾಗಿದ್ದೀರಿ. ನಿಮ್ಮಿಂದ ಸಂಸ್ಥೆಗೆ ಕೀರ್ತಿ ಬಂದಿದೆ ಎಂದರು.

ಬಳಿಕ ಸಂಘಗಳ ಸದಸ್ಯರಿಗೆ ಲಾಭಾಂಶದ ಚೆಕ್ ವಿತರಣೆ ಮಾಡಲಾಯಿತು.

ನಬಾರ್ಡ್ ಬ್ಯಾಂಕ್ ಅಧ್ಯಕ್ಷ ಶಾಜಿ ಕೆ.ವಿ. ಮಾತನಾಡಿ, 1992ರಲ್ಲಿ ನಬಾರ್ಡ್ ಪ್ರಾರಂಭಗೊಂಡಿದ್ದು, ಅಂದಿನಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜೊತೆಗೂಡಿ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತ ಬಂದಿದೆ. ಈಗ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿ ನಡೆಯುತ್ತಿರುವುದು ಖುಷಿಯ ವಿಚಾರ. ಸಣ್ಣ ಮಧ್ಯಮ ಉದ್ಯಮಗಳಿಗೆ ಸ್ವ-ಸಹಾಯ ಸಂಘಗಳು ಬೆಂಬಲ ನೀಡುತ್ತಿರುವ ಕಾರಣ ಗ್ರಾಮೀಣ ಮಟ್ಟದಲ್ಲಿ ಬಹಳಷ್ಟು ಅಭಿವೃದ್ಧಿಯಾಗಿದೆ. 600 ಕೋಟಿಯಷ್ಟು ದೊಡ್ಡ ಮೊತ್ತ ಲಾಭವನ್ನು ಸ್ವ-ಸಹಾಯ ಸಂಘದ ಸದಸ್ಯರಿಗೆ ಹಂಚುವ ಸಂಘದ ಕ್ರಮ ಶ್ಲಾಘನೀಯವಾದುದು ಎಂದರು.

ವೇದಿಕೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆ, ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿದ್ದರು.

ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಪ್ರಾಸ್ತಾವಿಕ ಮಾತನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು.ಶಾಂತಾರಾಮ್ ಆರ್. ಪೈ, ಪ್ರವೀಣ್ ಎಂ.ಸಿ. ಕಾರ್ಯಕ್ರಮ ನಿರೂಪಿಸಿದರು. ಆನಂದ ಸುವರ್ಣ ಧನ್ಯವಾದ ಸಮರ್ಪಿಸಿದರು.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 252 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 295 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 196 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ