ನಿರಂತರವಾಗಿ ಶುದ್ಧ ಕುಡಿಯುವ ನೀರು ಪಡೆಯಲು 40 ಶುದ್ಧಗಂಗಾ ಘಟಕಗಳಿಗೆ ಸೋಲಾರ್ ಇನ್ವರ್ಟರ್ ಅಳವಡಿಕೆ: ಧರ್ಮಾಧಿಕಾರಿ‌ ಡಾ. ವೀರೇಂದ್ರ ಹೆಗ್ಗಡೆ ಹೇಳಿಕೆ: ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಜೊತೆ ಒಡಂಬಡಿಕೆ ಪತ್ರ ವಿನಿಮಯ: ₹ 2.40 ಕೋಟಿ ವೆಚ್ಚದಲ್ಲಿ 40 ಘಟಕಗಳಿಗೆ ಅಳವಡಿಕೆ

ಧರ್ಮಸ್ಥಳ: ರಾಜ್ಯದ ಬಯಲು ಸೀಮೆ‌ ಜಿಲ್ಲೆಗಳ‌ ಜನತೆಗೆ ಶುದ್ಧ ಕುಡಿಯುವ ನೀರು‌ ಒದಗಿಸುವ ಸಲುವಾಗಿ‌ ಶುದ್ಧ ಗಂಗಾ ಘಟಕ‌ ಸ್ಥಾಪಿಸಲಾಗಿದೆ. ಈ ಮೂಲಕ ಜನತೆ ಉತ್ತಮ ಆರೋಗ್ಯ‌ ಪಡೆಯುವಂತಾಗಿದೆ. ‌ಆದರೆ ಕೆಲವು ಘಟಕಗಳಲ್ಲಿ‌ ಪವರ್ ಕಟ್ ನಂತಹಾ‌ ಸಮಸ್ಯೆಯಿಂದ ಮುಕ್ತಿ‌ ಪಡೆಯಲು‌, ಸೋಲಾರ್ ಜೋಡಣೆ ಮಾಡಲಾಗುತ್ತಿದೆ.‌‌ ಆರಂಭದಲ್ಲಿ ಸೆಲ್ಕೋ ಪೌಂಡೇಶನ್ ಇದೀಗ ಆಯ್ದ 40 ಶುದ್ಧಗಂಗಾ ಘಟಕಗಳಿಗೆ ಉಚಿತ ಸೋಲಾರ್‌ ಇನ್ವರ್ಟರ್ ಅಳವಡಿಸಲು ಇಚ್ಛಿಸಿದ್ದಾರೆ. ಪ್ರತೀ ಘಟಕಕ್ಕೆ ಸುಮಾರು ರೂ. 5.00 ಲಕ್ಷ ವೆಚ್ಚವಾಗುವ ಈ ಯೋಜನೆಯಂತೆ ಸುಮಾರು 40 ಘಟಕಗಳಿಗೆ ರೂ. 2.40 ಕೋಟಿ ವೆಚ್ಚ ತಗುಲಲಿದೆ. ಈ ವೆಚ್ಚವನ್ನು ಪೂರ್ತಿಯಾಗಿ ಸೆಲ್ಲೋ ಫೌಂಡೇಶನ್ ಭರಿಸಲಿದೆಯಲ್ಲದೇ ಮುಂದಿನ ಒಂದು ವರ್ಷದವರೆಗೆ ನಿರ್ವಹಣೆಯನ್ನೂ ಉಚಿತವಾಗಿ ಮಾಡಲಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ‌ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಬೀಡಿನಲ್ಲಿ‌ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ‌ಒಡಂಬಡಿಕೆ‌ ಹಸ್ತಾಂತರ ಕಾರ್ಯಕ್ರಮದಲ್ಲಿ‌ ಭಾಗವಹಿಸಿ‌ ಮಾತನಾಡಿದರು.

ರಾಜ್ಯದಾದ್ಯಂತ ಕಡುಬಡವರಿಗೂ ಅತೀ ಕಡಿಮೆ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರನ್ನು ಶುದ್ಧ ಗಂಗಾ ಮೂಲಕ ಒದಗಿಸಲಾಗುತ್ತಿತ್ತು. ಯೋಜನೆಯ ಈ ಮಹತ್ವಾಕಾಂಕ್ಷಿ ಯೋಜನೆ ಗಮನಿಸಿ, ಸೆಲ್ಕೋ‌ಸೋಲಾರ್ ಈ‌ ಹೊಸ ಯೋಜನೆ ರೂಪಿಸಿದ್ದಾರೆ. ಶುದ್ಧ ಕುಡಿಯುವ ನೀರಿನ ಘಟಕವನ್ನು ಸಂಪೂರ್ಣ ಸೋಲಾರ್‌ನಿಂದಲೇ ನಡೆಸುವ ಹೊಸ ಪ್ರಯತ್ನ ಇದಾಗಲಿದ್ದು, ಪವರ್ ಕಟ್ ಇದ್ದರೂ ಜನತೆಗೆ ಯಾವುದೇ ಸಮಸ್ಯೆ ಎದುರಾಗದೆ ನಿರಂತರವಾಗಿ ಕುಡಿವ ನೀರನ್ನು ಪಡೆಯಬಹುದಾಗಿದೆ ಎಂದರು.


ಸೆಲ್ಕೋ ಫೌಂಡೇಶನ್ ಸಿ.ಇ.ಓ. ಡಾ. ಹರೀಶ್ ಹಂದೆ ಮಾತನಾಡಿ, ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಈಗಾಗಲೇ ‌ಹಳ್ಳಿ ಹಳ್ಳಿಗಳಲ್ಲಿ ಸೌರ ವಿದ್ಯುತ್ ಬಳಕೆ ಜಾರಿಗೊಂಡಿತ್ತು. ಇದೀಗ ಪ್ರಥಮವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶುದ್ಧ ಗಂಗಾ 40 ಘಟಕಗಳಿಗೆ ‌ಸೋಲಾರ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಮುಂದೆ ಇದು ವಿಸ್ತರಣೆಯಾಗುವ ಸಾಧ್ಯತೆ ಇದೆ. ಅದೇ ರೀತಿ ವಿವಿಧ ವಿಚಾರಗಳಿಗೆ ‌ಸೌರ ವಿದ್ಯುತ್ ‌ಘಟಕ ಬಳಕೆಯ ಕುರಿತು ‌ಸಂಶೋಧನೆಗಳು ನಡೆಯುತ್ತಿವೆ ಎಂದರು.

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಸಮಕ್ಷಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್. ಹೆಚ್. ಮಂಜುನಾಥ್ ಸಸ್ಟೈಯ್ನ್ ಪ್ಲಸ್ ನಿರ್ದೇಶಕ ಹಾಗೂ ಸೋಷಿಯಲ್ ಆಲ್ಫಾ ಹಾಗೂ ಮನೋಜ್ ಕುಮಾರ್ ಒಪ್ಪಂದ ಪತ್ರಗಳ ವಿನಿಮಯ ಮಾಡಿಕೊಂಡರು.

ಈ ಸಂದರ್ಭದಲ್ಲಿ ಸೆಲ್ಕೋ ಫೌಂಡೇಶನ್ ಸಿ.ಇ.ಓ. ಡಾ. ಹರೀಶ್ ಹಂದೆ, ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್., ಸೆಲ್ಕೋ ಸೋಲಾರ್‌ನ ಸಿ.ಇ.ಓ. ಮೋಹನ ಭಾಸ್ಕರ ಹೆಗಡೆ, ಪ್ರಧಾನ ವ್ಯವಸ್ಥಾಪಕ ಜಗದೀಶ್ ಪೈ, ಯೋಜನೆ ಪ್ರಾದೇಶಿಕ ಹಣಕಾಸು ನಿರ್ದೇಶಕ ಶಾಂತರಾಮ ಪೈ, ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ, ಸೆಲ್ಕೊ ಸೋಲಾರ್‌ನ ಗುರುಪ್ರಕಾಶ್ ಶೆಟ್ಟಿ, ಸಸ್ಟೈನ್ ಪ್ಲಸ್‌ನ ಸುಪ್ರಿಯಾ ಗೌಡ, ಶುದ್ಧಗಂಗಾ ವಿಭಾಗದ ನಿರ್ದೇಶಕ ಲಕ್ಷ್ಮಣ್ ಎಂ., ಯೋಜನಾಧಿಕಾರಿ ಯುವರಾಜ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 13 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 19 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 37 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 210 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 61 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ