ಚಾರ್ಮಾಡಿಯಲ್ಲಿ ಸಾಮಾಜಿಕ ಅರಣ್ಯೀಕರಣ ಯೋಜನೆಗೆ ಡಾ. ಹೆಗ್ಗಡೆಯವರಿಂದ ಚಾಲನೆ. 20 ಎಕರೆ ಪ್ರದೇಶದಲ್ಲಿ 500ಕ್ಕೂ ಹೆಚ್ಚಿನ ಹಣ್ಣಿನ ಬೀಜ ಬಿತ್ತನೆ ಕಾರ್ಯ

ಚಾರ್ಮಾಡಿ : ಚಾರ್ಮಾಡಿಯ ಕಣ್ಣಪ್ಪಾಡಿ ಮೀಸಲು ಅರಣ್ಯ ಪ್ರದೇಶದಲ್ಲಿ ಹಣ್ಣಿನ ಮತ್ತು ತರಕಾರಿ ಗಿಡಗಳ ಬೀಜದುಂಡೆಗಳನ್ನು ಹಾಕುವ ಮೂಲಕ ‘ಸಾಮಾಜಿಕ ಅರಣ್ಯೀಕರಣ’ ಯೋಜನೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಚಾಲನೆ ನೀಡಿದರು.

ಚಾರ್ಮಾಡಿಯ ಕನಪ್ಪಾಡಿ ಮೀಸಲು ಅರಣ್ಯ ಪ್ರದೇಶದ ಸುಮಾರು 20 ಎಕರೆ ಪ್ರದೇಶದಲ್ಲಿ 500ಕ್ಕೂ ಹೆಚ್ಚಿನ ಹಣ್ಣಿನ ಗಿಡಗಳ ಬಿತ್ತನೆ ಕಾರ್ಯವನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಜನಜಾಗೃತಿ ವೇದಿಕೆ, ಶೌರ್ಯ ವಿಪತ್ತು ನಿರ್ವಹಣಾ ಘಟಕ, ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಂಡಿತು. ಮಾವು, ಹಲಸು, ಹೆಬ್ಬಲಸು, ನೇರಳೆ, ಕಾನಾಜೆ ಸೇರಿದಂತೆ ಹಲವು ಬೀಜಗಳನ್ನು ಸಂಗ್ರಹಿಸಿ ಅವುಗಳನ್ನು ಬೀಜದುಂಡೆಗಳಾಗಿ ಪರಿವರ್ತಿಸಿ ಭೂಮಿಗಿಳಿಸಲಾಯಿತು.

ಕಾಡಿನಿಂದ ನಾಡಿಗೆ ಬರುವ ಕಾಡು ಪ್ರಾಣಿಗಳಿಗೆ ಕಾಡಿನಲ್ಲೇ ಆಹಾರ ದೊರಕಬೇಕೆನ್ನುವ ಉದ್ದೇಶದಿಂದ ಧರ್ಮಸ್ಥಳದಲ್ಲಿ ಇತ್ತೀಚೆಗೆ ಅರಣ್ಯ ಸಚಿವರಿಂದ ‘ಸಾಮಾಜಿಕ ಅರಣ್ಯೀಕರಣ ’ ಯೋಜನೆಗೆ ಚಾಲನೆ ನೀಡಲಾಗಿತ್ತು. ಬಯಲು ಪ್ರದೇಶ ಮತ್ತು ಖಾಲಿ ಜಾಗಗಳಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಮತ್ತು ಅರಣ್ಯ ಪ್ರದೇಶದಲ್ಲಿ ಹಣ್ಣಿನ ಬೀಜಗಳನ್ನು ಎಸೆಯುವ ಮೂಲಕ ಅರಣ್ಯದಲ್ಲಿ ಹಣ್ಣಿನ ಗಿಡಗಳನ್ನು ಬೆಳೆಸಲಾಗುತ್ತಿದೆ.

ಈ ಸಂದರ್ಭದಲ್ಲಿ ಹೆಗ್ಗಡೆಯವರ ಪುತ್ರಿ ಶ್ರದ್ಧಾ ಅಮಿತ್ ,ಸುರೇಂದ್ರ ಕುಮಾರ್ ಅವರ ಮಗಳು ಶ್ರುತಾ ಜಿತೇಶ್, ಶ್ರೀ.ಕ್ಷೇ. ಧ. ಗ್ರಾ. ಯೋಜನೆಯ ಮುಖ್ಯ ನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್, ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಾಸ್, ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರಾದೇಶಿಕ ನಿರ್ದೇಶಕ ಜೈವಂತ್ ಪಟಗಾರ್, ತಾಲೂಕು ಯೋಜನಾಧಿಕಾರಿ ಜಯಕರ್ ಶೆಟ್ಟಿ, ಚಾರ್ಮಾಡಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಉಮೇಶ್ ಗೌಡ, ಚಾರ್ಮಾಡಿ ಚಾರ್ಮಾಡಿ ಉಪವಲಯ ಅರಣ್ಯಾಧಿಕಾರಿ ರವೀಂದ್ರ ಅಂಕಲಾಗಿ, ಅರಣ್ಯ ರಕ್ಷಕ ಶರತ್ ಶೆಟ್ಟಿ, ವೀರು ಶೆಟ್ಟಿ ಧರ್ಮಸ್ಥಳ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಬೆಳ್ತಂಗಡಿಯ ಸದಸ್ಯರು, ಚಾರ್ಮಾಡಿ ಪೆಂಟ್ರೋಲ್ ಬಂಕ್ ಮಾಲಕ ಅನಂತ ಭಟ್ ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗಿಗಳಾದರು.

ವರದಿ : ಸ್ವಸ್ತಿಕ್ ಕನ್ಯಾಡಿ

Spread the love
  • Related Posts

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ…

    Spread the love

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜಾಗೃತಿ ವೇದಿಕೆ ಹಾಸನ, ಲಯನ್ಸ್ ಕ್ಲಬ್ ಸಕಲೇಶಪುರ, ರೋಟರಿ ಕ್ಲಬ್ ಸಕಲೇಶಪುರ, ಬಂಟರ ಸಂಘ ಸಕಲೇಶಪುರ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ 14/10/2025ನೇ ಮಂಗಳವಾರ ಬೆಳಿಗ್ಗೆ 10ಗಂಟೆಯಿಂದ…

    Spread the love

    You Missed

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 17 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 17 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 41 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 37 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    • By admin
    • October 7, 2025
    • 59 views
    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

    • By admin
    • October 7, 2025
    • 57 views
    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ