ಶ್ರೀ ಲಕ್ಷ್ಮೀಯ ಅವಮಾನ ಮಾಡುವ ಹಾಗೂ ‘ಲವ್ ಜಿಹಾದ್’ಗೆ ಪ್ರೋತ್ಸಾಹ ನೀಡುವ ‘ಲಕ್ಷ್ಮೀ ಬಾಂಬ್’ ಈ ಚಲನಚಿತ್ರವನ್ನು ನಿಷೇಧಿಸಿ ! – ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ದೀಪಾವಳಿಯ ಹಿನ್ನೆಲೆಯಲ್ಲಿ ನಟ ಅಕ್ಷಯ ಕುಮಾರ ಇವರ ‘ಲಕ್ಷ್ಮೀ ಬಾಂಬ್’ ಈ ಚಲನಚಿತ್ರವು ನವೆಂಬರ್ 9 ರಂದು ಪ್ರದರ್ಶನಗೊಳ್ಳಲಿದೆ. ದೀಪಾವಳಿಯ ಹಿನ್ನಲೆಯಲ್ಲಿ ಇದರ ಹೆಸರನ್ನು ಉದ್ದೇಶಪೂರ್ವಕವಾಗಿ ‘ಲಕ್ಷ್ಮೀ ಬಾಂಬ್’ ಎಂದು ಇಡಲಾಗಿದೆ. ಆದ್ದರಿಂದ ನಮ್ಮ ಮೊದಲನೇ ಆಕ್ಷೇಪಣೆ ಈ ಚಲನಚಿತ್ರದ ಹೆಸರಿಗಿದ್ದು ಇದರಿಂದ ಕೋಟಿಗಟ್ಟಲೆ ಹಿಂದೂಗಳ ದೇವರಾಗಿರುವ ಶ್ರೀಲಕ್ಷ್ಮೀದೇವಿಯ ವಿಡಂಬನೆ ಮಾಡಲಾಗಿದೆ. ಇನ್ನೊಂದೆಡೆ ಹಿಂದೂ ದೇವತೆಗಳ ಅವಮಾನ ಮಾಡುವ ‘ಲಕ್ಷ್ಮೀ ಪಟಾಕಿ’ ಬಂದ್ ಮಾಡಲು ನಾವು ಕಳೆದ ಅನೇಕ ವರ್ಷಗಳಿಂದ ಪ್ರಬೋಧನೆ ಮಾಡುತ್ತಿರುವಾಗ, ಈ ಚಲನಚಿತ್ರದ ಹೆಸರಿನಿಂದ ಅವರಿಗೆ ಪುನಃ ಪ್ರೋತ್ಸಾಹವೇ ಸಿಗಲಿದೆ. ಅದರೊಂದಿಗೆ ಈ ಚಲನಚಿತ್ರದ ನಾಯಕನ ಹೆಸರು ‘ಆಸಿಫ್’ ಹಾಗೂ ನಾಯಕಿಯ ಹೆಸರು ‘ಪ್ರಿಯಾ ಯಾದವ’ ಇಟ್ಟಿರುವುದು ಕಂಡು ಬಂದಿದೆ, ಅಂದರೆ ಇದರಿಂದ ಮುಸಲ್ಮಾನ ಯುವಕ ಹಾಗೂ ಹಿಂದೂ ಯುವತಿಯ ಸಂಬಂಧವನ್ನು ತೋರಿಸುವ ಮೂಲಕ ಉದ್ದೇಶಪೂರ್ವಕವಾಗಿ ‘ಲವ್ ಜಿಹಾದ್’ಗೆ ಪ್ರೋತ್ಸಾಹ ನೀಡಿದೆ. ಆದ್ದರಿಂದ ‘ಲಕ್ಷ್ಮೀ ಬಾಂಬ್’ ಚಲನಚಿತ್ರದ ಪ್ರದರ್ಶನದ ಮೇಲೆ ಕೂಡಲೇ ನಿರ್ಬಂಧ ಹೇರಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ ಶ್ರೀ. ಮೋಹನ ಗೌಡ ಇವರು ಒತ್ತಾಯಿಸಿದ್ದಾರೆ.

ಶ್ರೀ. ಗೌಡ ಇವರು ತಮ್ಮ ಮಾತನ್ನು ಮುಂದುವರಿಸುತ್ತಾ, ಒಂದುಕಡೆ ‘ಮೊಹಮ್ಮದ : ದಿ ಮೆಸೆಂಜರ್ ಆಫ್ ಗಾಡ್’ ಈ ಚಲನಚಿತ್ರದಿಂದಾಗಿ ಮುಸಲ್ಮಾನರ ಧಾರ್ಮಿಕ ಭಾವನೆಯನ್ನು ನೋವಾಗುತ್ತದೆ ಎಂದು ಅದರಲ್ಲಿ ಸ್ವತಃ ಹಸ್ತಕ್ಷೇಪ ಮಾಡಿ ನಿರ್ಬಂಧ ಹೇರುವಂತೆ ಮಹಾರಾಷ್ಟ್ರದ ಗೃಹಸಚಿವ ಕೇಂದ್ರ ಸರಕಾರದ ಬಳಿ ಶಿಫಾರಸ್ಸನ್ನು ಮಾಡಿತ್ತು. ಅದೇ ರೀತಿ ಹಿಂದೂಗಳ ದೇವತೆಗಳ ಅವಮಾನ ಮಾಡುವ ‘ಲಕ್ಷ್ಮೀ ಬಾಂಬ್’ ಚಲನಚಿತ್ರದ ಮೇಲೆಯೂ ಕೇಂದ್ರ ಹಾಗೂ ಕರ್ನಾಟಕದ ರಾಜ್ಯ ಸರಕಾರವು ನಿರ್ಬಂಧದ ಶಿಫಾರಸ್ಸನ್ನು ಮಾಡಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸಿದೆ, ಎಂದರು.

ಈ ಚಿತ್ರದ ಟ್ರೈಲರ್‌ನಲ್ಲಿ ಅಕ್ಷಯ ಕುಮಾರ್ ಭೂತ ಪೀಡಿತ ವ್ಯಕ್ತಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಅದರಲ್ಲಿರುವ ಭೂತ ತೃತೀಯಲಿಂಗಕ್ಕೆ ಸೇರಿದೆ ಎಂದು ತೋರುತ್ತದೆ. ಅಲ್ಲದೆ, ದೊಡ್ಡ ಕೆಂಪು ಕುಂಕುಮ, ಕೆಂಪು ಸೀರೆ ಧರಿಸಿ, ಕೂದಲನ್ನು ಸಡಿಲವಾಗಿ ಬಿಟ್ಟು, ಕೈಯಲ್ಲಿ ತ್ರಿಶೂಲ ಹಿಡಿದು ನರ್ತಿಸುವುದು ಅಂದರೆ ಒಂದು ರೀತಿ ದೇವಿಯ ರೂಪದಂತೆ ನಟಿಸುವ ಪ್ರಯತ್ನವು ಖಂಡನೀಯವಾಗಿದೆ. ದೀಪಾವಳಿಯ ಸಂದರ್ಭದಲ್ಲಿ ‘ಲಕ್ಷ್ಮಿ ಬಾಂಬ್’ ಹೆಸರಿನಲ್ಲಿ ಚಲನಚಿತ್ರಗಳನ್ನು ಮಾಡುತ್ತಿರುವವರು ಈದ್ ಸಂದರ್ಭದಲ್ಲಿ ‘ಆಯೆಷಾ ಬಾಂಬ್’, ‘ಶಬಿನಾ ಬಾಂಬ್’, ‘ಫಾತಿಮಾ ಬಾಂಬ್’ ಹೆಸರಿನಲ್ಲಿ ಚಲನಚಿತ್ರಗಳನ್ನು ಮಾಡಲು ಧೈರ್ಯ ಮಾಡುತ್ತಾರೆಯೇ? ಚಲನಚಿತ್ರಗಳ ನಿರ್ಮಾಪಕರು ಮತ್ತು ಆಡಳಿತಗಾರರು ಮುಸಲ್ಮಾನರ ಧಾರ್ಮಿಕ ಭಾವನೆಗಳ ಬಗ್ಗೆ ಯೋಚಿಸುವಂತೆ ಹಿಂದೂಗಳ ಧಾರ್ಮಿಕ ಭಾವನೆಗಳ ಬಗ್ಗೆ ಏಕೆ ಯೋಚಿಸುವುದಿಲ್ಲ? ಹಿಂದೂಗಳೊಂದಿಗೆ ಪಕ್ಷಪಾತ ಮಾಡುವುದೇ ಸರ್ವಧರ್ಮಸಮಭಾವದ ವ್ಯಾಖ್ಯೆಯಾಗದೆಯೇ ? ಹಿಂದೂವಿರೋಧವೇ ಪ್ರಸ್ತುತ ಜಾತ್ಯತೀತತೆಯಂತಿದೆ ಎಂದು ಶ್ರೀ. ಗೌಡ ಇವರು ಹೇಳಿದ್ದಾರೆ.

ಚಲನಚಿತ್ರ ನಿರ್ಮಾಪಕಿ ಶಬೀನಾ ಖಾನ್ ಹಾಗೂ ಬರಹಗಾರ ಫರ್ಹಾದ್ ಸಾಮಜಿ ಅವರು ಉದ್ದೇಶಪೂರ್ವಕವಾಗಿ ಹಿಂದೂದ್ವೇಷ ಹಬ್ಬಿಸುತ್ತಿದ್ದಾರೆ ಎಂಬುದು ಗಮನಕ್ಕೆ ಬರುತ್ತದೆ. ಆದರೆ, ಈ ಬೇಡಿಕೆಗಳನ್ನು ಗಮನಿಸದಿದ್ದರೆ ತೀವ್ರ ಆಂದೋಲನ ಮಾಡುವುದಾಗಿ ಶ್ರೀ. ಗೌಡ ಇವರು ಈ ವೇಳೆ ಎಚ್ಚರಿಕೆ ನೀಡಿದ್ದಾರೆ.

Spread the love
  • Related Posts

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ್ದು ಸಂಚಾರಕ್ಕೆ ತೊಡಕಾಗಿದ್ದು ತಕ್ಷಣವೇ ಕಾರ್ಯಪ್ರವೃತ್ತರಾದ ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಸಂಚಾರಕ್ಕೆ ಅನುವುಮಾಡಿಕೊಡಲಾಗಿದೆ. Spread the love

    Spread the love

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಬೆಳ್ತಂಗಡಿ : ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆದೇಶ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹವಮಾನ ಇಲಾಖೆಯ…

    Spread the love

    You Missed

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    • By admin
    • June 1, 2025
    • 45 views
    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    • By admin
    • May 31, 2025
    • 45 views
    ಭಾರಿ  ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    • By admin
    • May 30, 2025
    • 55 views
    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    • By admin
    • May 30, 2025
    • 69 views
    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ

    • By admin
    • May 27, 2025
    • 52 views
    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ

    ಧರ್ಮಸ್ಥಳ ಪೂರ್ಜೆ ಬಳಿ ಸಿಡಿಲು ಬಡಿದು ವ್ಯಕ್ತಿಗೆ ಗಾಯ ಆಸ್ಪತ್ರೆಗೆ ದಾಖಲು

    • By admin
    • May 26, 2025
    • 118 views
    ಧರ್ಮಸ್ಥಳ ಪೂರ್ಜೆ ಬಳಿ ಸಿಡಿಲು ಬಡಿದು ವ್ಯಕ್ತಿಗೆ ಗಾಯ ಆಸ್ಪತ್ರೆಗೆ ದಾಖಲು