ರಾಜ್ಯದಲ್ಲಿ ಜನವರಿ 18ರಿಂದ ಅಧಿಕೃತವಾಗಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ಅಧಿಸೂಚನೆ ಹೊರಡಿಸಿದ ರಾಜ್ಯ ಸರಕಾರ!

ಬೆಂಗಳೂರು : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ಜಾರಿಗೆ ತಂದಿದ್ದು ಈ ಕಾಯ್ದೆಯನ್ನು ಜನವರಿ 18ರಿಂದ ಅನ್ವಯವಾಗುವಂತೆ ರಾಜ್ಯದಲ್ಲಿ ಅಧಿಕೃತವಾಗಿ ಕಾನೂನು ಜಾರಿಗೊಳಿಸಿ, ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಈ ಕುರಿತಂತೆ ಗೆಜೆಟ್ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದ್ದು, ಕರ್ನಾಟಕ ಜಾನುವಾರ ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಆಧ್ಯಾದೇಶ 2020ನ್ನು ಜಾರಿಗೊಳಿಸಲಾಗಿದೆ.

ಜಾನುವಾರುಗಳನ್ನು ಯಾವುದೇ ವಿಧಾನದಿಂದ ಕೊಲ್ಲುವುದು ಮತ್ತು ಸಾಮಾನ್ಯವಾಗಿ ಸಾವಿಗೆ ಕಾರಣವಾಗುವ ದೈಹಿಕ ಹಾನಿಯ ಊನಗೊಳಿಸುವಿಕೆ ಮತ್ತು ಗಾಯಗೊಳಿಸುವಿಕೆಯನ್ನು ನಿಷೇಧಿಸಲಾಗಿದೆ.

ಯಾವುದೇ ಕಾನೂನು, ಪದ್ದತಿ ಅಥವಾ ಬಳಕೆಗೆ ವಿರುದ್ಧವಾಗಿ ಏನೇ ಒಳಗೊಂಡಿದ್ದರೂ ಯಾವೊಬ್ಬ ವ್ಯಕ್ತಿಯೂ ಜಾನುವಾರು ಹತ್ಯೆ ನಡೆಸತಕ್ಕದ್ದಲ್ಲ ಅಥವಾ ಜಾನುವಾರ ಹತ್ಯೆ ನಡೆಸುವಂತೆ ಮಾಡತಕ್ಕದ್ದಲ್ಲ. ಜಾನುವಾರ ಹತ್ಯೆಗಾಗಿ ಮಾರಾಟ ಮಾಡತಕ್ಕದ್ದಲ್ಲ. ಎಂಬುದಾಗಿ ಜಾನುವಾರು ಹತ್ಯೆ ನಿಷೇಧಿಸಿದೆ.

ಒಂದು ವೇಳೆ ಜಾನುವಾರು ಹತ್ಯೆ ನಿಷೇಧ ಕಾಯ್ದೆಯನ್ನು ಉಲ್ಲಂಘನೆ ಮಾಡಿದಲ್ಲಿ, ಮೂರು ವರ್ಷಗಳಿಗೆ ಕಡಿಮೆಯಿಲ್ಲದ ಆದರೇ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲುವಾಸ ಅಥವಾ ಒಂದು ಜಾನುವಾರಿಗೆ ಐವತ್ತು ಸಾವಿರ ರೂಪಾಯಿಗಳಿಗೆ ಕಡಿಮೆಯಿಲ್ಲದ ಆದ್ರೇ, ಐದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಅಥವಾ ಅವೆರಡರಿಂದಲೂ ದಂಡಿತನಾಗತಕ್ಕದ್ದು.

ಎರಡನೇ ಬಾರಿ ಅಥವಾ ಮುಂದುವರೆದ ಅಪರಾಧದ ಸಂದರ್ಭದಲ್ಲಿ ಒಂದು ಲಕ್ಷ ರೂಪಾಯಿಗಳಿಗೆ ಕಡಿಮೆಯಿಲ್ಲದ ಆದ್ರೇ, ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಮುಂದುವರೆದ ಶಿಕ್ಷೆಯೊಂದಿಗೆ, ಜೊತೆಗೆ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾವಾಸ ಶಿಕ್ಷೆ ವಿಧಿಸಲಿದೆ.

Spread the love
  • Related Posts

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ್ದು ಸಂಚಾರಕ್ಕೆ ತೊಡಕಾಗಿದ್ದು ತಕ್ಷಣವೇ ಕಾರ್ಯಪ್ರವೃತ್ತರಾದ ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಸಂಚಾರಕ್ಕೆ ಅನುವುಮಾಡಿಕೊಡಲಾಗಿದೆ. Spread the love

    Spread the love

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಬೆಳ್ತಂಗಡಿ : ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆದೇಶ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹವಮಾನ ಇಲಾಖೆಯ…

    Spread the love

    You Missed

    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    • By admin
    • June 1, 2025
    • 27 views
    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    • By admin
    • June 1, 2025
    • 134 views
    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    • By admin
    • May 31, 2025
    • 98 views
    ಭಾರಿ  ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    • By admin
    • May 30, 2025
    • 71 views
    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    • By admin
    • May 30, 2025
    • 79 views
    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ

    • By admin
    • May 27, 2025
    • 55 views
    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ