ಇಂದು ಸಂಪುಟ ವಿಸ್ತರಣೆ ಬಹುತೇಕ ಖಚಿತ! ಇಂದು ಆಗುತ್ತಾ 15 ಸಚಿವರ ಪ್ರಮಾಣವಚನ?

ಬೆಂಗಳೂರು: ಸಂಪುಟ ವಿಸ್ತರಣೆ ಪಟ್ಟಿಗೆ ಅಂತಿಮ ಸ್ವರೂಪ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವರಿಷ್ಠರಿಂದ ಬುಲಾವ್‌ ಬಂದಿದ್ದು, ನಿನ್ನೆ ಸಂಜೆ ಅವರು ದಿಲ್ಲಿಗೆ ತೆರಳಿದ್ದಾರೆ. ಪ್ರವಾಹ, ಕೋವಿಡ್‌ ನಿರ್ವಹಣೆ ಹಿನ್ನೆಲೆಯಲ್ಲಿ’ಎಮರ್ಜೆನ್ಸಿ ಕ್ಯಾಬಿನೆಟ್‌’ ರಚನೆಗೆ ಹೈಕಮಾಂಡ್‌ನಿಂದ ತಕ್ಷಣ ಸಮ್ಮತಿ ದೊರಕುವ ನಿರೀಕ್ಷೆಯಿದ್ದು, ನೂತನ ಸಚಿವರು ನಾಳೆ ಸಂಜೆಯೇ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ದಿಲ್ಲಿ ನಿರ್ಧಾರ ವಿಳಂಬವಾದರೆ ಇದು ಬುಧವಾರಕ್ಕೆ ಮುಂದೂಡಿಕೆ ಆಗಬಹುದು. 

ಜಾತಿ, ಪ್ರಾದೇಶಿಕ ಪ್ರಾತಿನಿಧ್ಯ ಒಳಗೊಂಡು ಸಾಮಾಜಿಕ ನ್ಯಾಯದಡಿ ಸಂಪುಟ ರಚಿಸಲು ಹೈಕಮಾಂಡ್‌ ಯೋಚಿಸಿದೆ. ಸಿಎಂ ಬೊಮ್ಮಾಯಿ ಕೂಡ ಈ ನಿಟ್ಟಿನಲ್ಲಿ ಆಲೋಚನೆ ಮಾಡಿದ್ದಾರೆ. 5 ರಿಂದ 10 ಸ್ಥಾನ ಖಾಲಿ ಉಳಿಸಿಕೊಂಡು ಉಳಿದ ಸ್ಥಾನ ಭರ್ತಿ ಮಾಡಲು ಸಿಎಂ ಬಯಸಿದ್ದಾರೆ. ಆದರೆ ‘ಈ ಬಾರಿ 12ರಿಂದ 15 ಸಚಿವರ ನೇಮಕ ಸಾಕು. ಎರಡನೇ ಹಂತದಲ್ಲಿ ಪೂರ್ಣ ಪ್ರಮಾಣದ ವಿಸ್ತರಣೆ ಕೈಗೊಳ್ಳುವುದು ಉತ್ತಮ’ ಎನ್ನುವುದು ಹೈಕಮಾಂಡ್‌ ನಿಲುವಾಗಿದೆ ಎನ್ನಲಾಗಿದೆ. 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಮುಖ್ಯಮಂತ್ರಿಯವರು ಸೋಮವಾರ ಭೇಟಿ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೂ ಮಾತುಕತೆ ನಡೆಯಲಿದೆ. ಸಂಭಾವ್ಯ ಸಚಿವರ ಪಟ್ಟಿಯನ್ನು ಅವರು ಕೊಂಡೊಯ್ದಿದ್ದಾರೆ. ಇದಕ್ಕೆ ಮುನ್ನ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೂ ಚರ್ಚಿಸಿದ್ದಾರೆ. ಬಿಎಸ್‌ವೈ ಕೂಡ ತಮ್ಮ ಆಪ್ತರಲ್ಲಿ ಕೆಲವರ ಹೆಸರು ಶಿಫಾರಸು ಮಾಡಿರುವ ಸಾಧ್ಯತೆ ಇರುತ್ತದೆ. ಇದರ ಹೊರತಾಗಿ ಹೈಕಮಾಂಡ್‌ ಅಪೇಕ್ಷೆಯೇನಿದೆ ಎನ್ನುವುದರ ಬಗ್ಗೆ ಸ್ಪಷ್ಟತೆಯಿಲ್ಲ. 

ನೂತನ ಸಚಿವರ ಪ್ರಮಾಣದ ವಚನದ ಬಗ್ಗೆ ಯಾವುದಕ್ಕೂ ತಯಾರಾಗಿರುವಂತೆ ಮುಖ್ಯ ಕಾರ್ಯದರ್ಶಿ ಕಾರ್ಯಾಲಯದಿಂದ ಶಿಷ್ಟಾಚಾರ ವಿಭಾಗಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. 

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 253 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 295 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 196 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ