ದೀಪಾವಳಿವರೆಗೂ ದೇಶದ 80 ಕೋಟಿ ಜನರಿಗೆ ಉಚಿತ ರೇಷನ್: ಪ್ರಧಾನಿ ಮೋದಿ ಮಹತ್ವದ ಘೋಷಣೆ

ನವದೆಹಲಿ: ಕೊರೋನಾ ಸಂಕಷ್ಟದಿಂದ ತತ್ತರಿಸಿರುವ ದೇಶವಾಸಿಗಳ ನೆರವಿಗೆ ಧಾವಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೀಪಾವಳಿವರೆಗೂ ಉಚಿತ ರೇಷನ್ ವಿತರಣೆ ಮಾಡುವುದಾಗಿ ಘೋಷಣೆ ಮಾಡಿದೆ.

ದೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆ ಮಾಡಿದ್ದು, “ಪ್ರಧಾನಿ ಗರೀಬ್ ಅನ್ನ ಕಲ್ಯಾಣ ಯೋಜನೆ” ಯನ್ನು ವಿಸ್ತರಣೆ ಮಾಡಲಾಗಿದ್ದು, ದೀಪಾವಳಿವರೆಗೂ ಅಂದರೆ ನವೆಂಬರ್’ವರೆಗೂ ಉಚಿತ ರೇಷನ್ ವಿತರಣೆ ಮಾಡಲಿದ್ದು, ಇದರಿಂದ ದೇಶದ 80 ಕೋಟಿ ಜನರಿಗೆ ಪ್ರಯೋಜನವಾಗಲಿದೆ ಎಂದರು.

ಒಂದು ದೇಶ,ಒಂದು ರೇಷನ್ ಕಾರ್ಡ್ ಆಗುತ್ತಾ?
ಕೇಂದ್ರ ಸರ್ಕಾರ ಒಂದು ಬಹುದೊಡ್ಡ ಕನಸು ಕಂಡಿದೆ. ಒಂದು ರಾಷ್ಟ್ರಕ್ಕೆ ಒಂದೇ ರೇಷನ್ ಕಾರ್ಡ್ ಯೋಜನೆ ಜಾರಿಗೊಳಿಸುವ ಕುರಿತು ಹೇಳಿದ್ದಾರೆ. ಇದರಿಂದ ಜನರಿಗೆ ತುಂಬಾನೇ ಪ್ರಯೋಜನವಾಗಲಿದೆ. ರೇಷನ್ ಕಾರ್ಡ್ ಇದ್ದರೆ ಎಲ್ಲಿ ಬೇಕಾದ್ರೂ ಕೂಡ ಪಡಿತರವನ್ನು ಪಡೆಯಬಹುದು ಅಂತ ಮೋದಿ ಹೇಳಿದರು.


ಸರ್ಕಾರ ಬಡವರ ಜೊತೆ ಸದಾ ಇರುತ್ತೆ
ನಮ್ಮ ಸರ್ಕಾರ ಬಡವರ ಜೊತೆ ಸದಾ ಇರುತ್ತೆ ಅಂತ ಮೋದಿ ಸಾರಿದ್ರು. ಬಡವರು, ಶ್ರಮಿಕರ ಸಬಲೀಕರಣಕ್ಕೆ ಕ್ರಮ ಕೈಗೊಳ್ಳುವುದಾಗಿ ಸಾರಿದ್ರು. ಆರ್ಥಿಕ ಪರಿಸ್ಥಿತಿ ಬಲಪಡಿಸುವುದಕ್ಕೂ ಹೆಚ್ಚಿನ ಒತ್ತು ನೀಡಲಾಗುತ್ತೆ ಅಂತನೂ ಪ್ರಧಾನಿ ಸಾರಿದ್ದಾರೆ.


ಮೋದಿ ಮಾಡಿದ ಪ್ರಾರ್ಥನೆ ಏನು ಗೊತ್ತಾ
ಕೊರೋನಾ ವಿರುದ್ಧ ಹೋರಾಡುತ್ತಾ ಅನ್ ಲಾಕ್ 2ನ್ನು ಪ್ರವೇಶ ಮಾಡಿದ್ದೇವೆ ದೇಶದ ಜನರಲ್ಲಿ ಪ್ರಾರ್ಥನೆ ಮಾಡುವುದು ಒಂದೇ, ಮಾಸ್ಕ್ ಧರಿಸಿ, ಅಂತರವನ್ನು ಕಾಪಾಡಿಕೊಳ್ಳಿ. ಬೇರೇ ದೇಶಗಳಿಗೆ ಹೋಲಿಸಿದ್ರೆ ನಮ್ಮ ದೇಶದ ಸ್ಥಿತಿ ಉತ್ತಮವಾಗಿದೆ, ಮೊದಲ ಲಾಕ್ ಡೌನ್ ಲಕ್ಷಾಂತರ ಜನರ ಪ್ರಾಣ ಉಳಿದಿದೆ.
ಪದೇ ಪದೆ ಕೈ ತೊಳೆಯುವುದನ್ನು ಬಿಡಬೇಡಿ, ಲಾಕ್ ಡೌನ್ ಸಮಯದಲ್ಲಿ ನಿಯಮ ಪಾಲಿಸಿದಂತೆ ನಿಯಮವನ್ನು ಪಾಲನೆ ಮಾಡಿ ಎಂದರು.
ಜನ ಸಾಮಾನ್ಯನಿಗೂ ಪ್ರಧಾನಿಗೂ ಒಂದೇ ನಿಯಮ:
ಮಾಸ್ಕ್ ಧರಿಸುವ ವಿಚಾರದಲ್ಲಿ ಯಾವುದೇ ತಾರತಮ್ಯವಿಲ್ಲ, ಪ್ರಧಾನಿಯಾದರೂ ಒಂದೇ ಸಾಮಾನ್ಯನಾದರೂ ಒಂದೇ, ಮಾಸ್ಕ್ ಧರಿಸದ ದೇಶದ ಪ್ರಧಾನಿಗೆ 13 ಸಾವಿರ ರೂಪಾಯಿ ದಂಡ ವಿಧಿಸಿದ್ದು ನಿಮಗೆಲ್ಲ ಗೊತ್ತಿದೆ. ಭಾರತದಲ್ಲಿ ಸ್ಥಳೀಯ ಆಡಳಿತಗಳು ಕೂಡ ಈ ರೀತಿಯ ಕೆಲಸ ಮಾಡಬೇಕು ಎಂದರು.ಎಂದರು
9ಸಾವಿರ ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ಕಿಸಾನ್ ಸಮ್ಮಾನ್ ನಿಧಿ ತಲುಪಿದೆ ಅಂತ ಪ್ರಧಾನಿ ಇದೇ ವೇಳೆ ಘೋಷಣೆ ಮಾಡಿದ್ರು. ರೈತರ ಖಾತೆಗಳಿಗೆ 18 ಸಾವಿರ ಕೋಟಿ ರೂಪಾಯಿ ಹಣ ಜಮೆಯಾಗಿದೆ ಎಂದರು.

Spread the love
  • Related Posts

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ್ದು ಸಂಚಾರಕ್ಕೆ ತೊಡಕಾಗಿದ್ದು ತಕ್ಷಣವೇ ಕಾರ್ಯಪ್ರವೃತ್ತರಾದ ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಸಂಚಾರಕ್ಕೆ ಅನುವುಮಾಡಿಕೊಡಲಾಗಿದೆ. Spread the love

    Spread the love

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಬೆಳ್ತಂಗಡಿ : ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆದೇಶ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹವಮಾನ ಇಲಾಖೆಯ…

    Spread the love

    You Missed

    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    • By admin
    • June 1, 2025
    • 27 views
    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    • By admin
    • June 1, 2025
    • 134 views
    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    • By admin
    • May 31, 2025
    • 98 views
    ಭಾರಿ  ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    • By admin
    • May 30, 2025
    • 71 views
    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    • By admin
    • May 30, 2025
    • 79 views
    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ

    • By admin
    • May 27, 2025
    • 55 views
    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ