ಕರ್ನಾಟಕದಲ್ಲಿ KSRTC ಗೆ “ಟ್ರೇಡ್‌ ಮಾರ್ಕ್” ಸಂಕಷ್ಟ! KSRTC ಇನ್ಮುಂದೆ ಕೇರಳದ ಪಾಲು

ಕಾಸರಗೋಡು: KSRTC ಎಂಬ ಹೆಸರನ್ನು ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ’ ಬಳಸುವಂತಿಲ್ಲ. ರಾಜ್ಯ ಸಾರಿಗೆ ಸಂಸ್ಥೆಗೆ ಕೇಂದ್ರ ‘ಟ್ರೇಡ್‌ ಮಾರ್ಕ್ ರಿಜಿಸ್ಟ್ರಿ’ ಇಂಥ ಶಾಕ್‌ ನೀಡಿದೆ. 7 ವರ್ಷಗಳ ಕಾನೂನು ಹೋರಾಟದಲ್ಲಿ KSRTC ಎನ್ನುವ ಹೆಸರು ಮತ್ತು ಲಾಂಛನವನ್ನು ತನ್ನ ಕೈ ವಶ ಮಾಡಿಕೊಳ್ಳುವಲ್ಲಿ ಕೇರಳ ಸಾರಿಗೆ ಸಂಸ್ಥೆ ಯಶಸ್ವಿಯಾಗಿದೆ.

ಎರಡು ರಾಜ್ಯಗಳ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಕೆಎಸ್ಸಾರ್ಟಿಸಿ ಎಂಬ ಹೆಸರಿನ ಪ್ರಯೋಗ ವರ್ಷಗಳಿಂದಲೇ ಚಾಲ್ತಿಯಲ್ಲಿತ್ತು. ಆದರೆ ಇದು ಕರ್ನಾಟಕದ್ದು ಮಾತ್ರ ಎಂಬುದಾಗಿ 2014ರಲ್ಲಿ ಕರ್ನಾಟಕ ಸಾರಿಗೆ ಕೇರಳಕ್ಕೆ ನೋಟೀಸ್‌ ನೀಡಿತ್ತು. ಆದರೆ ಕೇರಳ ಸಾರಿಗೆ ಸಂಸ್ಥೆ ಕೇಂದ್ರ ಸರಕಾರದ ‘ಟ್ರೇಡ್‌ ಮಾರ್ಕ್ ರಿಜಿಸ್ಟ್ರಿ’ಗೆ ಅರ್ಜಿ ಸಲ್ಲಿಸಿ ಅದು ತನಗೆ ಸೇರಿದ್ದೆಂದು ವಾದಿಸಿತ್ತು.

ಇದನ್ನು ಪುರಸ್ಕರಿಸಿರುವ ಭಾರತ ಸರಕಾರದ ಟ್ರೇಡ್‌ಮಾರ್ಕ್ ನೋಂದಣಿ ಪ್ರಾಧಿಕಾರ, ಸಾರಿಗೆ ಬಸ್‌ಗಳಲ್ಲಿ ಕೆಎಸ್‌ಆರ್‌ಟಿಸಿ ಪದನಾಮ ಮತ್ತು ಲಾಂಛನವು ಕೇರಳಕ್ಕೆ ಮಾತ್ರ ಸೀಮಿತವೆಂದು ಆದೇಶಿಸಿದೆ. ಇದರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ತನ್ನ ಹೆಸರನ್ನು ಬದಲಿಸಬೇಕಾದ ಸ್ಥಿತಿ ಎದುರಾಗಿದೆ. ಜತೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬಸ್‌ಗಳು, ನಿಲ್ದಾಣಗಳು ಹಾಗೂ ಕಚೇರಿಗಳೂ ಸೇರಿದಂತೆ ಇತರೆಡೆ ಬಳಸಿರುವ ಕೆಎಸ್‌ಆರ್‌ಟಿಸಿ ಹೆಸರು, ಲಾಂಛನವನ್ನು ತೆಗೆಯಬೇಕಾಗಿದೆ.

ತಿರುವಾಂಕೂರು ರಾಜ್ಯ ಸಾರಿಗೆ ಇಲಾಖೆ (ಟಿಎಸ್‌ಟಿಡಿ) ರಚನೆಯಾದಾಗ ಬ್ರಿಟಿಷ್ ರಾಜನ ಅವಧಿಯಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು 1965 ರಲ್ಲಿ ರಚಿಸಲಾಯಿತು. ಕರ್ನಾಟಕವು ಕೆಎಸ್‌ಆರ್‌ಟಿಸಿ ಹೆಸರನ್ನು 1973 ರಿಂದ ಬಳಸಲಾರಂಭಿಸಿತು. ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ಟ್ರೇಡ್​ ರಿಜಿಸ್ಟ್ರಿ ಕೇರಳದ ಪರ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಸಾರಿಗೆ ಇಲಾಖೆ, ರಾಜ್ಯ ಸಾರಿಗೆ ಇಲಾಖೆಗೆ ಇನ್ಮುಂದೆ ಕೆಎಸ್​ಆರ್​​ಟಿಸಿ ಎಂದು ಬಳಸಬೇಡಿ ಎಂದು ನೋಟಿಸ್ ಜಾರಿಗೊಳಿಸಲು ನಿರ್ಧರಿಸಿದೆ.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 65 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 194 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 28 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 21 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 18 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 45 views
    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ