ಬಾಡಿದ ತುಳಸಿಗಿಡವನ್ನು ಏನು ಮಾಡಬೇಕು? ಯಾವ ದಿನದಂದು ತುಳಸಿ ಗಿಡ ತೆಗೆಯೋದು ಸೂಕ್ತ

🖊️ ಪ್ರಶಾಂತಭಟ್ ಕೋಟೇಶ್ವರ

ತುಳಸಿ ಒಂದು ಸಸ್ಯ. ಆ ಸಸ್ಯದಲ್ಲಿರುವ ಜೀವಕ್ಕೆ ಎಷ್ಟು ಆಯುಷ್ಯವಿದೆಯೋ ಅಷ್ಟು ದಿವಸ ಇರುತ್ತದೆ. ಆ ನಂತರ ಗಿಡ ಬಾಡಿ(ಸತ್ತು) ಹೋಗುತ್ತದೆ.

ತುಳಸಿಕಟ್ಟೆಯ ಅಥವ ಮನೆಯ ಹತ್ತಿರದ ಬಾಡಿ ಹೋದ ತುಳಸೀ ಗಿಡವನ್ನು ಅವಶ್ಯವಾಗಿ ತೆಗೆಯಬಹುದು. ತೆಗೆದು ಹೊಸ ಸಸಿಯನ್ನು ತಂದು ನೆಡಬೇಕು.

ಬಾಡಿ ಹೋದ ಗಿಡವನ್ನು, ಮಂಗಳವಾರ, ಶುಕ್ರವಾರ, ಅಮಾವಾಸ್ಯಾ, ಪೌರ್ಣಮಿ, ಸಂಕ್ರಾಂತಿಗಳಂದು ತೆಗೆಯಬಾರದು ದ್ವಾದಶಿಯಂತೂ ಸರ್ವಥಾ ತೆಗೆಯಬಾರದು.

ಸಾಮಾನ್ಯವಾಗಿ ಯಾವುದೇ ಗಿಡವನ್ನು ಪುರುಷರೇ ತೆಗೆಯಬೇಕು. ವಂಶವನ್ನು ಬೆಳೆಸುವ ಮಹತ್ತರ ಸೌಭಾಗ್ಯದ ಕಾರ್ಯವನ್ನು ಹೊತ್ತಿರುವ ಸ್ತ್ರೀಯರು ಅದನ್ನು ಮಾಡತಕ್ಕದ್ದಲ್ಲ. ಅತ್ಯಂತ ಅನಿವಾರ್ಯ ಸಂದರ್ಭದಲ್ಲಿ ಸ್ತ್ರೀಯರು ಬಾಡಿ ಹೋದ ಗಿಡವನ್ನು ತೆಗೆಯಬಹುದು.ಹೊಸದಾದ ಗಿಡವನ್ನು ಮುತ್ತೈದೆಯಾದ ಸ್ತ್ರೀಯರು ನೆಡುವುದು ಇಡಿಯ ಕುಲಕ್ಕೆ ಯಶಸ್ಸನ್ನು ನೀಡುವ ಪುಣ್ಯಕಾರ್ಯ.

ಗಿಡ ತೆಗೆದಾದ ಮೇಲೆ ನೆರಳಿನಲ್ಲಿ ಒಂದಷ್ಟು ದಿವಸ ಪೂರ್ಣ ಒಣಗಿಸಬೇಕು. ಕಾಂಡದ ಬಳಿಯಿರುವ ದೊಡ್ಡ ಗಾತ್ರದ ಕಾಷ್ಠಗಳನ್ನು ಕೆಲವು ಹೋಮ ಹವನಗಳಲ್ಲಿ ಬಳಸುವುದರಿಂದ ಹತ್ತಿರದ ವೈದಿಕರಿಗೆ ಮತ್ತು ದೇವಾಲಯಗಳಲ್ಲಿ ನೀಡಬಹುದು .
ರೆಂಬೆ ಕೊಂಬೆಗಳಲ್ಲಿರುವ ಸಣ್ಣ ಸಣ್ಣ ಗಾತ್ರದ ಕಡ್ಡಿಗಳನ್ನೆಲ್ಲ ಪುಟ್ಟಪುಟ್ಟದಾಗಿ ಮುರಿದಿಟ್ಟುಕೊಳ್ಳಬೇಕು. ನಿತ್ಯ ವೈಶ್ವದೇವ ಮಾಡಬೇಕಾದರೆ, ಅಥವಾ ಹೋಮ ಮಾಡಬೇಕಾದರೆ ಅದನ್ನು ಬಳಸಬೇಕು. ದಪ್ಪ ಗಾತ್ರದ ಕಡ್ಡಿಯನ್ನು ಗಂಧ ತೇಯುವಾಗ ಬಳಸಬೇಕು. ತುಳಸೀಕಾಷ್ಠವನ್ನು ಸಾಣೆಕಲ್ಲಿನ ಮೇಲೆ ತೇದ ನಂತರ ಅದರಿಂದ ಬರುವ ಗಂಧದ ನೀರನ್ನು ಸ್ವಾದೂದದಕ್ಕೆ ಸೇರಿಸಿ ದೇವರಿಗೆ ಅಭಿಷೇಕ ಮಾಡಬೇಕು. ದೇವರಿಗೆ ಅತ್ಯಂತ ಪ್ರಿಯ.

ಕಾಂಡದ ಬಳಿಯಿರುವ ದೊಡ್ಡ ಗಾತ್ರದ ಕಾಷ್ಠಗಳನ್ನು ತುಳಸೀ ಮಣಿಗಳನ್ನು ಮಾಡಲು ಎತ್ತಿಟ್ಟುಕೊಳ್ಳಬಹುದು.

ಮತ್ತು ವಿಗ್ರಹಗಳನ್ನು ಸ್ವಚ್ಛ ಮಾಡಲು, ಪಂಚಾಮೃತ ಅಭಿಷೇಕ ಮಾಡಿದಾಗ ವಿಗ್ರಹದಲ್ಲಿ ಉಳಿಯುವ ಅಂಶಗಳನ್ನು ತೆಗೆಯಲು ಪುಟ್ಟ ಪುಟ್ಟ ತುಳಸೀಕಾಷ್ಠಗಳು ತುಂಬ ಉಪಯೋಗವಾಗುತ್ತವೆ.

ತುಳಸಿಯ ಕಾಷ್ಠವನ್ನು ತೆಗೆಯುವಾಗ ಕೈಗೆ ಸಿಗದಷ್ಟು ಸಣ್ಣಸಣ್ಣ ತುಳಸೀಕಾಷ್ಠದ ಕಣಗಳು ನೆಲದ ಮೇಲಿರುತ್ತವೆ. ಜೋಪಾನವಾಗಿ ಅವೆಲ್ಲವನ್ನು ತೆಗೆದು ಒಂದು ಉತ್ತಮ ಪಾತ್ರೆಯಲ್ಲಿಟ್ಟುಕೊಂಡು ದೇವರಿಗೆ ಧೂಪ ಹಾಕುವಾಗ ಅದನ್ನು ಬಳಸಬೇಕು. ಇದು ದೇವರಿಗೆ ಅತ್ಯಂತ ಪ್ರಿಯ.

ಮನೆಯಲ್ಲಿ ಮರಣವುಂಟಾದಾಗ, ದೇಹವನ್ನು ಸುಡಬೇಕಾದರೆ ಚಿತೆಯಲ್ಲಿನ ನೂರಾರು ಕಟ್ಟಿಗೆಗಳ ಮಧ್ಯದಲ್ಲಿ ಒಂದು ಸಣ್ಣ ತುಳಸೀಕಾಷ್ಠವಿದ್ದರೂ ಸಕಲ ಪಾಪಗಳಿಂದ ಜೀವ ಮುಕ್ತನಾಗುತ್ತಾನೆ ಎಂದು ಶಾಸ್ತ್ರದ ವಚನವಿದೆ.

ಯದ್ಯೇಕಂ ತುಲಸೀಕಾಷ್ಠಂ
ಮಧ್ಯೇ ಕಾಷ್ಠಶತಸ್ಯ ಚ
ದಾಹಕಾಲೇ ಭವೇನ್ಮುಕ್ತಿಃ
ಪಾಪಕೋಟಿಯುತಸ್ಯ ಚ

ಹೀಗಾಗಿ ಸಾವುಂಟಾದವರ ಮನೆಗೆ ಹೋಗುವಾಗ ಮನೆಯಲ್ಲಿನ ಒಂದಷ್ಟು ಕಾಷ್ಠವನ್ನು ತೆಗೆದುಕೊಂಡು ಹೋಗಿ ಕೊಡಬೇಕು.

ಹೀಗೆ, ಕೈಗೆ ಸಿಗಲಾರದಂತಹ ಕಣದಿಂದ ಪುಡಿಯಿಂದ ಆರಂಭಿಸಿ ಗಟ್ಟಿಯ ಕಾಷ್ಠದವರೆಗೆ ತುಳಸೀ ಗಿಡ ಭಗವಂತನಿಗೆ ಸಮರ್ಪಿತವಾಗಬೇಕು. ತುಳಸೀ ಕಾಷ್ಟದಿಂದ ಮಣಿಗಳ ಮಾಡಿ ಧಾರಣೆ ಮಾಡಬಹುದು ಇದು ಶರೀರ ಹಾಗೂ ಮನಸ್ಸನ್ನು ಶುದ್ಧೀಕರಿಸುವುದು. ದೇವರ ಪೂಜೆಗೆ ತುಳಸಿ ಸಿಗದಿದ್ದಾಗ ತುಳಸೀ ಕಾಷ್ಟವನ್ನಾದರೂ ಉಪಯೋಗಿಸಬಹುದು. ತುಲಸೀ ಕಾನನಂ ಯತ್ರ ಯತ್ರ ಪದ್ಮವನಾನಿ ಚ। ವಸಂತಿ ವೈಷ್ಣವಾ ಯತ್ರ ತತ್ರ ಸನ್ನಿಹಿತೋ ಹರಿಃ।

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 330 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 301 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 201 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 301 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 159 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 90 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ