ಜಿಹಾದ್ ಅನ್ನೋದು ಮುಸ್ಲಿಮರ ಧರ್ಮ ಯುದ್ಧ, ಭಾರತವನ್ನು ಇಸ್ಲಾಮಿಕ್ ದೇಶವನ್ನಾಗಿಸಲು ಜಗತ್ತಿನ ಮುಸ್ಲಿಂ ದೇಶಗಳು ಪಣ ತೊಟ್ಟಿವೆ: ಜಗದೀಶ ಕಾರಂತ

ಉಡುಪಿ: ಜಿಹಾದ್ ಅನ್ನೋದು ಮುಸ್ಲಿಮರ ಧರ್ಮ ಯುದ್ಧ. ಭಾರತವನ್ನು ಇಸ್ಲಾಮಿಕ್ ದೇಶವನ್ನಾಗಿಸಲು ಜಗತ್ತಿನ ಮುಸ್ಲಿಂ ದೇಶಗಳು ಪಣ ತೊಟ್ಟಿವೆ. ಇದಕ್ಕಾಗಿ ಜಿಹಾದ್ ಹೆಸರಲ್ಲಿ ಭಾರತ ವಿರುದ್ಧ ಮುಸ್ಲಿಂ ರಾಷ್ಟ್ರಗಳು ಧರ್ಮ ಯುದ್ಧವನ್ನು ಸಾರಿವೆ ಎಂದು ಹಿಂದು ಜಾಗರಣ ವೇದಿಕೆ ಸಂಘಟನಾ ಕಾರ್ಯದರ್ಶಿ ಜಗದೀಶ ಕಾರಂತ ಹೇಳಿದ್ದಾರೆ.

ವಿಜಯದಶಮಿ ಪ್ರಯುಕ್ತ ಉಡುಪಿಯಲ್ಲಿ ಹಮ್ಮಿಕೊಂಡಿದ್ದ ದುರ್ಗಾ ದೌಡ್ ಕಾರ್ಯಕ್ರಮದಲ್ಲಿ ಸೇರಿದ್ದ ನೂರಾರು ಕಾರ್ಯಕರ್ತರನ್ನು ಉದ್ದೇಶಿಸಿ ಜಗದೀಶ ಕಾರಂತ ಭಾಷಣ ಮಾಡಿದರು. ಸಿರಿಯಾದ ಐಸಿಸ್ ಅನ್ನೋದು ತಾಲಿಬಾನಿಗಳ ಸೋದರ ಸಂಘಟನೆ ಈ ಐಸಿಸ್ ಉಗ್ರವಾದಿ ಸಂಘಟನೆಗಳಿಗೆ ನಮ್ಮ ಏರಿಯಾದಲ್ಲಿಯೂ ಬೆಂಬಲ ಸಿಗುತ್ತಿದೆ. ನಮ್ಮ ನಡುವಿನಿಂದಲೇ ಐಸಿಸ್ ಕಾರ್ಯಕರ್ತರನ್ನಾಗಿ ಸೇರ್ಪಡೆಯೂ ಮಾಡಲಾಗುತ್ತಿದೆ. ಈ ರೀತಿಯ ಚಟುವಟಿಕೆ ಬಗ್ಗೆ ಹಿಂದುಗಳು ನಿಗಾ ಇಡಬೇಕು ಮತ್ತು ಇಂಥವನ್ನು ಹತ್ತಿಕ್ಕುವ ಕೆಲಸ ಮಾಡಬೇಕು. ಮಂಗಳೂರಿನಲ್ಲಿ ಸಿಎಎ ನೆಪದಲ್ಲಿ ನಡೆದ ಹಿಂಸಾಚಾರ ಅತ್ಯಂತ ವ್ಯವಸ್ಥಿತವಾಗಿ ನಡೆದಿತ್ತು. ಸಿಎಎ ಕಾಯ್ದೆಯು ಒಂದು ಕಾಲದಲ್ಲಿ ಭಾರತದ ಭಾಗವೇ ಆಗಿದ್ದ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳ ಅಲ್ಪಸಂಖ್ಯಾತರಿಗೆ ನಾಗರಿಕ ಹಕ್ಕುಗಳನ್ನು ನೀಡುವ ಕಾಯ್ದೆ. ಅದರಿಂದ ಮಂಗಳೂರಿನ ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆ ಆಗೋದಿಲ್ಲ.

ಆದರೆ, ಮಂಗಳೂರಿನಲ್ಲಿ ನಡೆದ ಸಿಎಎ ಪ್ರತಿಭಟನೆಯ ನೆಪದಲ್ಲಿ ಹಿಂಸಾಚಾರ ನಡೆಸಲಾಯ್ತು. ಆಟೋ, ಟೆಂಪೋ, ಗೂಡ್ಸ್ ವಾಹನಗಳಲ್ಲಿ ಕಲ್ಲುಗಳನ್ನು ತಂದು, ಪೊಲೀಸರ ಮೇಲೆ ಪ್ರಯೋಗ ಮಾಡಲಾಯ್ತು, ಸಾವಿರಾರು ಮುಸ್ಲಿಮರು ಸೇರಿ ಹಿಂಸಾಚಾರ ನಡೆಸಿದರು. ಇದನ್ನು ಅವರು ಸತ್ತರ್ ಫಂಕೋ ಚಳವಳಿ’ ಎಂದು ಕರೆದರು. ಅಂದಿನ ಪೊಲೀಸ್ ಕಮಿಷನರ್ ಪಿ.ಎಸ್. ಹರ್ಷ, ಶೂಟ್ ಆಂಡ್ ಸೈಟ್ ಆದೇಶ ಮಾಡದೇ ಇರುತ್ತಿದ್ದರೆ ಆವತ್ತಿನ ಸ್ಥಿತಿ ಬೇರೆಯದೇ ಆಗಿರುತ್ತಿತ್ತು ಎಂದು ಜಗದೀಶ ಕಾರಂತ ವಿಶ್ಲೇಷಣೆ ಮಾಡಿದ್ದಾರೆ.

ದುರ್ಗಾ ದೌಡ್ ಅನ್ನೋದು ಕರಾವಳಿಯ ದುಷ್ಟ ಶಕ್ತಿಗಳ ವಿರುದ್ಧದ ಒಗ್ಗಟ್ಟಿನ ಮಂತ್ರ ಅಷ್ಟೇ, ಬೆಂಗಳೂರಿನ ಕೆಜಿ ಹಳ್ಳಿ ಡಿಜೆ ಹಳ್ಳಿಯಲ್ಲಿ ಗಲಭೆ ಆಗಿದ್ದರೆ, ಅದಕ್ಕೆ ನಿಶ್ಚಿತ ಕಾರಣ ಇಲ್ಲದೇ ಆಗಿದ್ದಲ್ಲ. ಸಂಜೆ 4.30ರ ವೇಳೆಗೆ ಸೋಶಿಯಲ್ ಮೀಡಿಯಾದಲ್ಲಿ ಹರಿದುಬಂದ ಸಂದೇಶಕ್ಕೆ ಪ್ರತಿಯಾಗಿ ಅದೇ ಸಂಜೆ 7.30ರ ವೇಳೆಗೆ ಸಾವಿರಾರು ಜನರು ಪೊಲೀಸ್ ಠಾಣೆಗಳಲ್ಲಿ ಸೇರಿದ್ದರು. ಆನಂತರ, ರಾತ್ರಿ 10 ಗಂಟೆ ಆಗುವಾಗ ಆ ಠಾಣೆ ವ್ಯಾಪ್ತಿಯ ಹಿಂದುಗಳ ಮನೆಗಳಿಗೆ ನುಗ್ಗಿದ್ದಲ್ಲದೆ, ಬೆಂಕಿ ಇಕ್ಕುವ ಕೆಲಸ ವ್ಯವಸ್ಥಿತವಾಗಿ ನಡೆದಿತ್ತು. ಆಗಸ್ಟ್ 15ರಂದು ಕಬಕದಲ್ಲಿ ಅದೇ ರೀತಿಯ ದುಷ್ಕೃತ್ಯ ನಡೆದಿತ್ತು. ಸರಕಾರಿ ಕಾರ್ಯಕ್ರಮ ನಡೆಸುತ್ತಿದ್ದ ಸ್ವಾತಂತ್ರ್ಯ ರಥವನ್ನು ತಡೆದು, ಧಿಕ್ಕಾರ ಕೂಗಿದರು. ಆನಂತರ, ರಥದಲ್ಲಿದ್ದ ಸಾವರ್ಕರ್ ಫೋಟೋ ತೆಗೆದು ಟಿಪ್ಪು ಸುಲ್ತಾನ್ ಫೋಟೋ ಹಾಕಲು ಒತ್ತಾಯಿಸಿದರು. ಜ.25ರಂದು ದೆಹಲಿಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದಾಗ, ರೈತರ ಹೆಸರಲ್ಲಿ ತಾಲಿಬಾನಿ ಮನಸ್ಥಿತಿಯ ಗೂಂಡಾಗಳು ಹಿಂಸಾಚಾರ ನಡೆಸಿದರು.

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 24 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 25 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 40 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 218 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 63 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ