ಅನಾಥಾಶ್ರಮಕ್ಕೆ ಸಹಾಯಹಸ್ತ ಚಾಚುವ ನೆಪದಲ್ಲಿ ಮನೆಗೆ ಬಂದು ವೃದ್ದೆಗೆ ಚಾಕು ತೋರಿಸಿ ಚಿನ್ನಾಭರಣಗಳನ್ನು ದೋಚಿದ ಖತರ್ನಾಕ್ ಕಳ್ಳ

ಬೆಳ್ತಂಗಡಿ: ಮನೆಬಾಗಿಲಿಗೆ ಭಿಕ್ಷಾಟನೆ ಸೋಗಿನಲ್ಲಿ ಬರುವ ಅಪರಿಚಿತ ವ್ಯಕ್ತಿಗಳ ಮೇಲೆ ಹೆಚ್ಚು ನಿಗಾವಹಿಸುವುದು ಸೂಕ್ತ. ನಾವು ಅನಾಥಾಶ್ರಮ ಮಾಡುತ್ತಿದ್ದೇವೆ, ನಾವು ಕಡಿಮೆ ದರದಲ್ಲಿ ನೋವಿನ ಎಣ್ಣೆ ನೀಡುತ್ತೇವೆ, ಸುಗಂಧ ದ್ರವ್ಯಗಳನ್ನು ಕಡಿಮೆ ಬೆಲೆಯಲ್ಲಿ ನೀಡುತ್ತೇವೆ ಎಂದು ಮನೆ ಬಾಗಿಲಿಗೆ ಬರುವ ವ್ಯಕ್ತಿಗಳ ಮೇಲೆ ಸಾರ್ವಜನಿಕರು ಒಂದು ಕಣ್ಣಿಡಬೇಕಾದ ಅನಿವಾರ್ಯತೆ ಇದೆ.ಅಂದಹಾಗೆ ಈ ವಿಷಯವನ್ನು ಯಾಕೆ ತಮ್ಮ ಮುಂದೆ ಇಡುತ್ತಿದ್ದೇವೆ ಎಂದರೇ ಎಲ್ಲೋ ದೂರದ ಊರಿನಲ್ಲಿ ಜನವಸತಿ ಇಲ್ಲದ ಪ್ರದೇಶದಲ್ಲಿ ಇಂತಹ ಅಪರಾಧ ಸುದ್ದಿಗಳನ್ನು ನಾವು ಕೇಳುತ್ತಾ ಬಂದಿದ್ದೇವೆ ಆದರೆ ಇತ್ತೀಚಿನ ದಿನಗಳಲ್ಲಿ ತಾಲೂಕಿನ ಹೃದಯ ಭಾಗ ಉಜಿರೆಯ ಸನಿಹದಲ್ಲೇ ಇರುವ ಮನೆಯೊಂದಕ್ಕೆ ಅನಾಥಾಶ್ರಮಕ್ಕೆ ಸಹಾಯಹಸ್ತ ಚಾಚುವ ನೆಪದಲ್ಲಿ ಬಂದು ಚಾಕು ತೋರಿಸಿ ವೃದ್ದೆಯೊಬ್ಬರ ಕತ್ತಿನಲ್ಲಿದ್ದು ಮಾಂಗಲ್ಯ ಸರ ಕಸಿದು ಪರಾರಿಯಾದ ಘಟನೆ ಉಜಿರೆಯ ಹಳೆಪೇಟೆಯಲ್ಲಿ ನಡೆದಿದೆ.

ಘಟನೆಯ ವಿವರ : ಅಂದು 21/04/2023ನೇ ಶುಕ್ರವಾರ ಬೆಳಿಗ್ಗೆ ಸುಮಾರು 11.30ರ ವೇಳೆಗೆ ಅಪರಿಚಿತ ವ್ಯಕ್ತಿಯೊಬ್ಬ ಉಜಿರೆಯ ಹಳೇಪೇಟೆಯಲ್ಲಿರುವ ಜೈನ್ ಕಂಪೌಂಡ್ ನಲ್ಲಿರುವ ಮನೆಯೊಂದಕ್ಕೆ ಬಂದು ನಾವು ಅನಾಥಾಶ್ರಮ ನಡೆಸುತ್ತಿದ್ದೇವೆ ನಮಗೆ‌ ಸಹಕಾರ ನೀಡಿ ವಸ್ತ್ರ ಹಾಗೂ ನಗದು ರೂಪದಲ್ಲಿ ಸಹಕರಿಸಿ ಎಂದು ಮನೆಯೋಡತಿಯಲ್ಲಿ ಕೇಳಿಕೊಳ್ಳುತ್ತಾನೆ ಅಷ್ಟರಲ್ಲೇ ಮನೆಗೆ ಬಂದವರನ್ನು ಬರಿಗೈಯಲ್ಲಿ ಕಳುಹಿಸಿ ಬಾರದೆಂದು ಮಾತೃಹೃದಯೀ(71ವಯಸ್ಸಿನ ವೃದ್ಧೆ) ಮನಸ್ಸು ಕರಗಿಸಿ 2ಸಾರಿ ಹಾಗೂ ನಗದನ್ನು ನೀಡುತ್ತಾರೆ ಅಷ್ಟರಲ್ಲೇ ಅಪರಿಚಿತ ವ್ಯಕ್ತಿ ವೃದ್ದೆಯ ಬಳಿ ಮಾತನಾಡುತ್ತಾ ಮನೆಯಲ್ಲಿ ಯಾರೆಲ್ಲ ಇದ್ದೀರಿ ಎಂಬಿತ್ಯಾದಿ ಮಾಹಿತಿ ಕಲೆಹಾಕುತ್ತಾನೆ ಆದರೆ ಆತನ ನೀಚ ಬುದ್ಧಿಯನ್ನರಿಯದ ವೃದ್ಧೆಯು ಮಗ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದು ಸಂಜೆ ವೇಳೆಗೆ ಮನೆಗೆ ಬರುತ್ತಾನೆ ಮನೆಯ ಇತರೇ ಸದಸ್ಯರು ಹೊರಗಡೆ ಹೋಗಿದ್ದು ತಾನೊಬ್ಬಳೇ ಇರುವ ಬಗ್ಗೆ ತಿಳಿಸುತ್ತಾರೆ. ಇಷ್ಟು ಮಾಹಿತಿಯನ್ನು ಪಡೆದ ಅಪರಿಚಿತ ವ್ಯಕ್ತಿ ಅಲ್ಲಿಂದ ವಾಪಾಸಾಗಿದ್ದಾನೆ. ತದನಂತರ ಮದ್ಯಾಹ್ನ ಬಿರುಬಿಸಿಲಿನ ಸಮಯ ಸುಮಾರು 2ಗಂಟೆಯ ವೇಳೆಯಲ್ಲಿ ಮತ್ತೆ ಆ ಮನೆಗೆ ಚಾಕು ಸಹಿತ ಎಂಟ್ರಿಕೊಟ್ಟವನೇ ಮನೆಯ ಬಾಗಿಲು ತೆರೆದು ವೃದ್ಧೆಯ ಕತ್ತಿಗೆ ಚಾಕು ಇಟ್ಟು ನಗ ಹಾಗೂ ನಗದು ನೀಡುವಂತೆ ಬೆದರಿಕೆ ಹಾಕುತ್ತಾನೆ ಅಷ್ಟರಲ್ಲೇ ಆತನ ಕಣ್ಣಿಗೆ ಬಿದ್ದದ್ದು ಆ ಅಜ್ಜಿಯ ಕುತ್ತಿಗೆಯಲ್ಲಿದ 3ಪವನ್ ತೂಕದ ಮಾಂಗಲ್ಯ ಸರ ಹಾಗೂ ಕಿವಿಯಲ್ಲಿದ್ದ ಕಿವಿಯೊಲೆ. ಕ್ಷಣ ಮಾತ್ರದಲ್ಲಿಯೇ ವೃದ್ದೆ ಯಲ್ಲಿದ್ದ ಚಿನ್ನಾಭರಣಗಳನ್ನು ಕಸಿದು ಪರಾರಿಯಾಗಿದ್ದಾನೆ.

ಇದೀಗ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಇದೀಗ ತಾಲೂಕಿನ ಬೇರೆ ಬೇರೆ ಗ್ರಾಮಗಳಲ್ಲಿಯೂ ಇಂತಹದ್ದೇ ತಂಡ ಬಂದಿರುವ ಬಗ್ಗೆ ಸಾರ್ವಜನಿಕರು ಗುಮಾನಿ ವ್ಯಕ್ತಪಡಿಸುತ್ತಿದ್ದಾರೆ. ಏನೇ ಆಗಲಿ ಇಂತಹ ಅಪರಿಚಿತ ವ್ಯಕ್ತಿಗಳು ಮನೆಗೆ ಬಂದಾಗ ಜಾನತಣದಿಂದ ವ್ಯವಹರಿಸುವುದು ಉತ್ತಮ.

ಅಂತಹ ಸಂದೇಹಗಳು ಬಂದರೇ ತಾಲೂಕಿನ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡಿ

ಬೆಳ್ತಂಗಡಿ ಪೋಲೀಸ್ ಠಾಣೆ ಸಂಪರ್ಕ: 08256232093

ಧರ್ಮಸ್ಥಳ ಪೋಲೀಸ್ ಠಾಣೆ ಸಂಪರ್ಕ 08256277253

ಪುಂಜಾಲಕಟ್ಟೆ ಪೋಲೀಸ್ ಠಾಣೆ ಸಂಪರ್ಕ 08022943346

ವೇಣೂರು ಪೋಲೀಸ್ ಠಾಣೆ ಸಂಪರ್ಕ 08256286232

Spread the love
  • Related Posts

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ…

    Spread the love

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜಾಗೃತಿ ವೇದಿಕೆ ಹಾಸನ, ಲಯನ್ಸ್ ಕ್ಲಬ್ ಸಕಲೇಶಪುರ, ರೋಟರಿ ಕ್ಲಬ್ ಸಕಲೇಶಪುರ, ಬಂಟರ ಸಂಘ ಸಕಲೇಶಪುರ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ 14/10/2025ನೇ ಮಂಗಳವಾರ ಬೆಳಿಗ್ಗೆ 10ಗಂಟೆಯಿಂದ…

    Spread the love

    You Missed

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 16 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 17 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 41 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 34 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    • By admin
    • October 7, 2025
    • 58 views
    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

    • By admin
    • October 7, 2025
    • 55 views
    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ