
ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿಯು, ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಸಹಕಾರದೊಂದಿಗೆ, ಬೆಳ್ತಂಗಡಿ ಯಕ್ಷ ಸಂಭ್ರಮ ಸಹಯೋಗದೊಂದಿಗೆ “ಮಹಿಳಾ ಯಕ್ಷ ಸಂಭ್ರಮ” ಆಗಸ್ಟ್ 2 & 3ರಂದು ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಮಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸದಸ್ಯರಾದ ದಯಾನಂದ ಪಿ. ಬೆಳಾಲು ತಿಳಿಸಿದರು.
ಅವರು ಜು.28 ರಂದು ಉಜಿರೆ ರಾಮಕೃಷ್ಣ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.