ಗೋಕುಲಾಷ್ಟಮಿಯ ಶುಭದಿನದಂದು ನೇಪಾಳಿ ಭಾಷೆಯಲ್ಲಿ ‘ಸನಾತನ ಸಂಸ್ಥೆ’ಯ ಜಾಲತಾಣದ ಲೋಕಾರ್ಪಣೆ !


ಮಂಗಳೂರು: ಭಾರತ ಮತ್ತು ನೇಪಾಳದ ನಡುವೆ ಸಾವಿರಾರು ವರ್ಷಗಳಿಂದ ಸಾಂಸ್ಕೃತಿಕ ಸಂಬಂಧವಿದೆ. ‘ಹಿಂದೂ ಧರ್ಮ’ ಇದು ಎರಡೂ ದೇಶಗಳಲ್ಲಿನ ಸಮಾನವಾದ ಅಂಶವಾಗಿದೆ. ಸಹಜವಾಗಿಯೇ ಎರಡೂ ದೇಶಗಳಲ್ಲಿಯ ಶ್ರದ್ಧಾಸ್ಥಾನಗಳು, ನಂಬಿಕೆ, ಹಬ್ಬ-ಉತ್ಸವ ಇತ್ಯಾದಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಸಾಮ್ಯತೆ ಇದೆ. ಸನಾತನ ಸಂಸ್ಥೆಯ ಜಾಲತಾಣಕ್ಕೆ ಜಗತ್ತಿನಾದ್ಯಂತ ಹಿಂದೂ ಸಮಾಜದ ವಾಚಕರಿದ್ದಾರೆ. ಈ ಜಾಲತಾಣಕ್ಕೆ ವಿವಿಧ ದೇಶಗಳಲ್ಲಿಯ ಹಿಂದೂ ನಾಗರಿಕರ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಅದಕ್ಕಾಗಿ ಕೆಲವು ನೇಪಾಳಿ ಜಿಜ್ಞಾಸುಗಳು ನೇಪಾಳದಲ್ಲಿರುವ ಹಿಂದೂ ಸಮಾಜಕ್ಕೆ ಧರ್ಮಶಿಕ್ಷಣ ಸಿಗಲು ಸನಾತನದ ಜಾಲತಾಣವು ನೇಪಾಳಿ ಭಾಷೆಯಲ್ಲಿಯೂ ಆರಂಭಿಸುವಂತೆ ಆಗ್ರಹಿಸಿದ್ದರು. ಸನಾತನ ಸಂಸ್ಥೆ ಹಿಂದೂ ಧರ್ಮಪ್ರಸಾರದ ವ್ರತವನ್ನು ಕೈಗೆತ್ತಿಕೊಂಡು ಕಾರ್ಯನಿರತವಾಗಿದ್ದರಿಂದ ನಾವು ಈ ಬೇಡಿಕೆಯನ್ನು ಪೂರ್ಣ ಮಾಡುತ್ತಿದ್ದೇವೆ. ಜಗತ್ತಿನಾದ್ಯಂತ ನೇಪಾಳಿ ಭಾಷೆಯವರಿಗೆ ಧರ್ಮಶಿಕ್ಷಣ ಸಿಗಲು ನಾವು ನೇಪಾಳಿ ಜಾಲತಾಣವನ್ನು ಆರಂಭಿಸುತ್ತಿದ್ದೇವೆ ಎಂದು ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ. ಚೇತನ ರಾಜಹಂಸ್ ಇವರು ಹೇಳಿದ್ದಾರೆ.

ಆಗಸ್ಟ್ 11 ರಂದು ಗೋಕುಲಾಷ್ಟಮಿಯ ಮಂಗಳ ದಿನದಂದು ‘ಆನ್‌ಲೈನ್’ ಕಾರ್ಯಕ್ರಮದ ಮೂಲಕ ಜಾಲತಾಣವನ್ನು ಲೋಕಾರ್ಪಣೆಯನ್ನು ಮಾಡಲಾಯಿತು. ಈ ಸಮಯದಲ್ಲಿ ‘ರಾಷ್ಟ್ರೀಯ ಧರ್ಮಸಭಾ ನೇಪಾಳ’ದ ಅಧ್ಯಕ್ಷ ಡಾ. ಮಾಧವ ಭಟ್ಟರಾಯಿ ಹಾಗೂ ಅವರ ಧರ್ಮಪತ್ನಿ, ಅದೇರೀತಿ ನೇಪಾಳ ಸರಕಾರದ ಮಾಜಿ ರಾಜ್ಯಸಚಿವ ಸೌ. ಕಾಂತಾ ಭಟ್ಟರಾಯಿ ಇವರ ಹಸ್ತದಿಂದ ಲೋಕಾರ್ಪಣೆಯಾಯಿತು. ಈ ಮಂಗಳ ದಿನದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು ಡಾ. ಚಾರುದತ್ತ ಪಿಂಗಳೆ ಇವರೂ ದೆಹಲಿಯಿಂದ ‘ಆನ್‌ಲೈನ್’ನ ಮೂಲಕ ಉಪಸ್ಥಿತರಿದರು.

ಈ ಪ್ರಸಂಗದಲ್ಲಿ ಡಾ. ಭಟ್ಟರಾಯಿಯವರು ಮಾತನಾಡುತ್ತಾ, “ಸನಾತನ ಸಂಸ್ಥೆಯ ನೇಪಾಳಿ ಭಾಷೆಯ ಜಾಲತಾಣ ನಮಗೆ ಬಹಳ ಉಪಯುಕ್ತವಾಗಿದೆ ಎಂದೆನಿಸಿತು ಮತ್ತು ಇದು ನಮಗೆ ಬಹಳ ಸಹಾಯ ಮಾಡಲಿದೆ. ನೇಪಾಳದಲ್ಲಿ ಈ ರೀತಿಯ ಧಾರ್ಮಿಕ ವೆಬ್‌ಸೈಟ್ಸ್ ತುಂಬ ಕಡಿಮೆ ಇವೆ. ಇದು ಕೇವಲ ಧರ್ಮದ ಬಗ್ಗೆ ಜ್ಞಾನ ಮಾತ್ರವಲ್ಲದೇ, ಹಿಂದೂ ರಾಷ್ಟ್ರದ ಬಗ್ಗೆ ನಮಗೆಲ್ಲರಿಗೂ ಮಾರ್ಗದರ್ಶನ ಮಾಡಲಿದೆ”, ಎಂದರು.

ಈ ಸಮಯದಲ್ಲಿ ಸದ್ಗುರು ಡಾ. ಚಾರುದತ್ತ ಪಿಂಗಳೆಯವರು ಮಾತನಾಡುತ್ತಾ, “ವೆಬ್‌ಸೈಟ್‌ನಲ್ಲಿ ನೀಡಿರುವ ಹಿಂದೂ ಧರ್ಮಶಿಕ್ಷಣ ಇತ್ಯಾದಿ ಮಾಹಿತಿಗಳ ಮಾಧ್ಯಮದಿಂದ ಭಾರತ ಮತ್ತು ನೇಪಾಳ ಇವೆರಡೂ ದೇಶಗಳ ಧರ್ಮಬಾಂಧವ್ಯ ದೃಢವಾಗಲಿದೆ, ಎರಡೂ ದೇಶಗಳಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ನಡೆಯುತ್ತಿರುವ ಅಭಿಯಾನವು ಮುಂದುವರಿಯಲಿದೆ”, ಎಂದರು.

ಕನ್ನಡ, ಹಿಂದಿ, ಮರಾಠಿ, ಗುಜರಾತಿ, ಆಂಗ್ಲ, ತೆಲುಗು, ತಮಿಳು, ಮಲ್ಯಾಳಮ್ ಈ ೮ ಭಾಷೆಗಳಲ್ಲಿ ಇರುವ ಈ ಜಾಲತಾಣವು ಇನ್ನು ಮುಂದೆ ನೇಪಾಳಿ ಭಾಷೆಯಲ್ಲೂ ಲಭ್ಯವಿರಲಿದೆ. ಈ ಜಾಲತಾಣದಲ್ಲಿ ಅಧ್ಯಾತ್ಮಿಕ ವಿಷಯದ ಸಂದೇಹ ನಿವಾರಣೆ ಮಾಡಲು ‘ಆನ್‌ಲೈನ್’ ಸಂಪರ್ಕದ ಸೌಲಭ್ಯವು ಲಭ್ಯವಿರಲಿದೆ. ಸನಾತನದ ಜಾಲತಾಣದ ಮೂಲಕ ಜಿಜ್ಞಾಸುಗಳು ಸಾಧನೆಯನ್ನು ಆರಂಭಿಸಿದ್ದಾರೆ ಹಾಗೂ ತಮ್ಮ ಜೀವನವನ್ನು ಆನಂದಮಯವಾಗಿಸಿಕೊಂಡಿದ್ದಾರೆ. ಆದ್ದರಿಂದ ಹೆಚ್ಚೆಚ್ಚು ಜಿಜ್ಞಾಸುಗಳು ಈ ಜಾಲತಾಣಕ್ಕೆ ಭೇಟಿ ನೀಡಿ ಸಾಧನೆಯನ್ನು ಆರಂಭಿಸಬೇಕು, ಎಂದು ಸನಾತನ ಸಂಸ್ಥೆಯ ವತಿಯಿಂದ ಕರೆ ನೀಡಲಾಗಿದೆ.

ಜಾಲತಾಣದ ಲಿಂಕ್ : www.Sanatan.org/nepali

Spread the love
  • Related Posts

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 17 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪ್ರೌಢಶಾಲೆಯ ಕುಮಾರಿ ಕು.ಯಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್ 7…

    Spread the love

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಸ.ಹಿ.ಉ.ಪ್ರಾ ಶಾಲೆಯ ಕುಮಾರಿ ರಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್…

    Spread the love

    You Missed

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 54 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 52 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 28 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 23 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 49 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 43 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ