‘ವಾಟ್ಸಾಪ್ ರಾಮಾಯಣ’ ಎಂಬ ವಿನೂತನ ಪ್ರಯೋಗ ಪೌರಾಣಿಕ ಸನ್ನಿವೇಶ ಕಥೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಅರಿವು ಮೂಡಿಸುವ ಪ್ರಯತ್ನದಲ್ಲಿ ಪುತ್ತೂರಿನ ಯುವಕ

"ವಾಟ್ಸಾಪ್ ರಾಮಾಯಣ"

ನಾವೆಲ್ಲರೂ ನಮ್ಮ ವಾಟ್ಸಾಪ್ ಗಳಲ್ಲಿ ಕಲೆ ಸಾಹಿತ್ಯ, ಹರಟೆ, ಮನರಂಜನೆ ಹೀಗೆ ಹಲವು ಬಗೆಯ ವೀಡಿಯೊಗಳನ್ನು ನೋಡುತ್ತೇವೆ.

ಹೀಗೆ ನೋಡಿ ಸಂತೋಷಗೊಳ್ಳುವ ಮನಸ್ಸು ಕೆಲವೇ ನಿಮಿಷಗಳಲ್ಲಿ ನಿರಾಸಕ್ತಿ ಹೊಂದುವುದನ್ನು ನಾವೆಲ್ಲರೂ ಗಮನಿಸಿರುತ್ತೇವೆ.
ಇದಕ್ಕೆ ಕಾರಣ ನಮ್ಮ ಮನಸ್ಸಿನಲ್ಲಿ ಏಕಾಗ್ರತೆ ಇಲ್ಲದಿರುವುದು. ಇದರಿಂದ ನೆನಪಿನ ಶಕ್ತಿಯೂ ಕುಂದುವುದು. ಹಾಗಾಗಿ ಕೆಲವೇ ನಿಮಿಷಗಳಲ್ಲಿ ಅಥವಾ ಸೆಕೆಂಡುಗಳಲ್ಲಿ ತಿಳಿಯಬಯಸುವ ವಿಡಿಯೋಗಳು ಅಥವಾ ಮಾಹಿತಿಗಳು ದೊರಕಿದರೆ ಅದೇ ಖುಷಿ.
ಈ ನಿಟ್ಟಿನಲ್ಲಿ ಪ್ರತಿದಿನವೂ ಅದೇ ಕೆಲವು ಸೆಕೆಂಡುಗಳಲ್ಲಿ ರಾಮಾಯಣದ ಘಟನೆಗಳನ್ನು ನೆನಪಿಸಿಕೊಳ್ಳುವ ಚಿಕ್ಕ ಪ್ರಯತ್ನ ಮಾಡುವುದು ಒಳಿತು.

ಹಾಗಾಗಿ ವಾಟ್ಸಾಪ್ ರಾಮಾಯಣ ಎಂಬ ವಿನೂತನ ಪ್ರಯೋಗದೊಂದಿಗೆ ಮತ್ತೆ ಪುನಃ ನಮ್ಮ ಪೌರಾಣಿಕ ಸನ್ನಿವೇಶ / ಕಥೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ನಾಡಿನ ಜನತೆಗೆ ತಲುಪಿಸುವ ಪ್ರಯತ್ನದಲ್ಲಿ ಶ್ರೀಯುತ ದುರ್ಗಾಪರಮೇಶ್ವರ ಭಟ್ ಪುತ್ತೂರು, ಇವರು ತೊಡಗಿದ್ದಾರೆ.
ಜಾಲತಾಣದಲ್ಲಿ ರಾಮಾಯಣದ ಕುರಿತಾಗಿ ದೊರಕುವ ಸಾಂದರ್ಭಿಕ ಚಿತ್ರಗಳಿಗೆ ತಮ್ಮದೇ ಧ್ವನಿಯಲ್ಲಿ ಕಥೆ ಹೇಳುತ್ತಿದ್ದಾರೆ.

ಲೇಖಕನಾಗಿಯೂ,ಭಾಷಣಕಾರರಾಗಿಯೂ ಹಾಗೆಯೇ ವೃತ್ತಿಯಲ್ಲಿ ಶಿಕ್ಷಕರಾಗಿ ಇವರು ಬೆಂಗಳೂರಿನ ಶುಭಂ ಕರೋತಿ ಮೈತ್ರೇಯೀ ಗುರುಕುಲದಲ್ಲಿ ಸೇವೆ ಸಲ್ಲಿಸುತ್ತಿದ್ದು, ಶಾಲೆಗಳು ತೆರೆಯದೇ ಮನೆಯಲ್ಲಿ ಬೇಸತ್ತು ಕುಳಿತಿರುವ ಮಕ್ಕಳ್ನನ್ನು ಉದ್ದೇಶಿಸಿ ಈ ವಿನೂತನ ಪ್ರಯೋಗವನ್ನು ನಡೆಸಲು ಮುಂದಾಗಿದ್ದಾರೆ.

ಪ್ರತಿದಿನವೂ 30 ಸೆಕೆಂಡಿನ ವಾಟ್ಸಾಪ್ ರಾಮಾಯಣವನ್ನು ಪಡೆಯಲು ತಾವು ಈ ಕೆಳಗೆ ನೀಡಿರುವ ನಂಬರನ್ನು ಸೇವ್ ಮಾಡಿಕೊಂಡು ವಾಟ್ಸಾಪ್ ಮಾಡಬಹುದಾಗಿದೆ
ತದನಂತರ ಪ್ರತಿದಿನವೂ ಕೆಲವೇ ಸೆಕೆಂಡುಗಳಲ್ಲಿ ರಾಮಾಯಣದ ಘಟನೆಗಳನ್ನು ತಿಳಿದುಕೊಳ್ಳಬಹುದು.
ವಾಟ್ಸಾಪ್ ಮೊ. ಸಂಖ್ಯೆ 9663826972.
ನಾಡಿನ ಜನತೆಯು ತಮ್ಮ ಜಾಲತಾಣಗಳಲ್ಲಿ ಹಂಚಿಕೊಳ್ಳುವುದರ ಮೂಲಕ ಪ್ರೋತ್ಸಾಹ ಮಾಡುವಂತೆ ವಿನಂತಿಸಿಕೊಂಡಿರುತ್ತಾರೆ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 265 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 296 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 197 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ