ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ”ಯುವನಿಧಿ” ವಿಶೇಷ ನೋಂದಣಿ ಅಭಿಯಾನ : ಸರ್ಕಾರ ಮಹತ್ವದ ಆದೇಶ.!

ಬೆಂಗಳೂರು : ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ದಿನಾಂಕ:06.01.2025 ರಿಂದ 20.01.2025 ರವರೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯ ಕಾಲೇಜುಗಳಲ್ಲಿ ಆಯೋಜಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಸೂಚಿತ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರದ ಖಾತರಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ನಿರುದ್ಯೋಗಿ ಭತ್ಯೆಯನ್ನು ನೀಡಿ ಸಬಲೀಕರಣಗೊಳಿಸಲು ಜಾರಿಗೊಳಿಸಿದ ಮಹತ್ತರ ಯೋಜನೆಯಾಗಿರುತ್ತದೆ.

ಈ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪ್ಲೋಮಾ(6 ಬೋರ್ಡ್‌ಗಳಿಂದ) ತೇರ್ಗಡೆಯಾದವರಿಗೆ ಮಾಹೆಯಾನ ರೂ.1500/- ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ.

2023-24 ನೇ ಸಾಲಿನಲ್ಲಿ ತೇರ್ಗಡೆಯಾದ 527273 ಅಭ್ಯರ್ಥಿಗಳ ದತ್ತಾಂಶವು ನ್ಯಾಡ್ ಪೋರ್ಟಲ್ ನಲ್ಲಿ ಅಪ್ ಲೋಡ್ ಆಗಿದ್ದರೂ ಸಹ ನಿರೀಕ್ಷಿತ ಮಟ್ಟದಲ್ಲಿ ಯುವನಿಧಿ ಯೋಜನೆಗೆ ಅಭ್ಯರ್ಥಿಗಳು ನೋಂದಣಿಯಾಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಯುವನಿಧಿ ಯೋಜನೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ನೋಂದಾಯಿಸಲು “ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ದಿನಾಂಕ:06.01.2025 ರಿಂದ 20.01.2025ರ ವರೆಗೆ ಹಮ್ಮಿಕೊಳ್ಳಲಾಗಿದ್ದು ಅಭ್ಯರ್ಥಿಗಳು ಈ ಕೆಳಕಂಡ ಅರ್ಹತೆಗಳನ್ನು ಹೊಂದಿರಬೇಕಾಗಿದೆ.

* ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 06 ವರ್ಷಗಳ ವರೆಗೆ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮದವರೆಗೆ ಅಧ್ಯಯನ ಮಾಡಿದವರು)

+ ತೇರ್ಗಡೆ ಹೊಂದಿರುವ 180 ದಿನಗಳ ನಂತರವೂ ಉದ್ಯೋಗ ದೊರಕದೆ, ಉನ್ನತ ವ್ಯಾಸಂಗಕ್ಕೆ ದಾಖಲಾಗದೆ ಇರುವ ಅಭ್ಯರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ.

+ ಸ್ವಯಂ ಉದ್ಯೋಗ ಹೊಂದಿಲ್ಲದ ಅಭ್ಯರ್ಥಿಗಳು.

+ ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ ಅಭ್ಯರ್ಥಿಗಳು,

ಈ ಹಿನ್ನೆಲೆಯಲ್ಲಿ ಇಲಾಖಾ ವ್ಯಾಪ್ತಿಯ ಎಲ್ಲಾ ಪದವಿ/ ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಹಾಗೂ ಡಿಪ್ಲೋಮ ಕಾಲೇಜುಗಳ ಪ್ರಾಂಶುಪಾಲರುಗಳು 2023 ಹಾಗೂ 2024 ನೇ ಸಾಲಿನಲ್ಲಿ ತಮ್ಮ ಕಾಲೇಜುಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ನೋಂದಣಿಗಾಗಿ ತಮ್ಮ ಕಾಲೇಜುಗಳಲ್ಲಿ ಯುವನಿಧಿ ವಿಶೇಷ ನೋಂದಣಿ ಸಹಾಯ ಕೇಂದ್ರಗಳನ್ನು ತೆರೆದು, ಕೇಂದ್ರಕ್ಕೆ ಅತ್ಯವಶ್ಯಕವಾಗಿ ಬೇಕಾದ ಗಣಕ ಯಂತ್ರ ವ್ಯವಸ್ಥೆ ಹಾಗೂ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಕಾಲೇಜು ಹಾಗೂ ಸ್ಥಳೀಯ ಮಟ್ಟದಲ್ಲಿ ಬ್ಯಾನರ್/ಪೋಸ್ಮರ್‌ಗಳನ್ನು ಅಳವಡಿಸಿ, ವ್ಯಾಪಕ ಪ್ರಚಾರವನ್ನು ಕೈಗೊಂಡು ಅರ್ಹ ಅಭ್ಯರ್ಥಿಗಳಿಂದ ಗರಿಷ್ಠ ಮಟ್ಟದ ನೋಂದಣಿ ಮಾಡಿಸುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ.

ಕಾಲೇಜುಗಳಲ್ಲಿ ಪ್ರಾಂಶುಪಾಲರು ಯುವನಿಧಿ ವಿಶೇಷ ನೋಂದಣಿ ಅಭಿಯಾನಕ್ಕಾಗಿ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್ ಅಧಿಕಾರಿಗಳು ಹಾಗೂ ಐ.ಟಿ ಕೋ-ಆರ್ಡಿನೇಟರ್ ಗಳಿಗೆ ಉಸ್ತುವರಿಯನ್ನು ವಹಿಸಿ ಅರ್ಹ ಅಭ್ಯರ್ಥಿಗಳಿಂದ ಅತಿ ಹೆಚ್ಚು ನೋಂದಣಿ ಮಾಡಿಕೊಳ್ಳಲು ಅನುಕೂಲ ಕಲ್ಪಿಸುವಂತೆ ಈ ಮೂಲಕ ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಯುವನಿಧಿ ಯೋಜನೆಯ ವೆಬ್‌ಸೈಟನ್ನು ಸಂಪರ್ಕಿಸುವುದು: https://yuvanidhischeme.in/

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 13 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 19 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 37 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 210 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 61 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ